ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಜನರ ಸೇವೆಗಾಗಿ ಆಕ್ಸಿಜನ್ ಬಸ್ ಸಿದ್ಧಪಡಿಸಲಾಗಿದೆ. ಈ ಬಸ್ ನ್ನು ಸರ್ಕಾರದ ಸಹಭಾಗಿತ್ವದಲ್ಲಿ ಕೆ.ಆರ್ ಪುರ ಕ್ಷೇತ್ರದ ರಾಮಮೂರ್ತಿನಗರದಲ್ಲಿ ಶಾಂತಾ ಕೃಷ್ಣಮೂರ್ತಿ ಫೌಂಡೇಶನ್ ಹಾಗೂ ಇಂಡಿಯಾ ನ್ಯಾಚುರಲ್ ರೆಮಿಡೀಸ್ ಸಹಕಾರದಲ್ಲಿ ಸಿದ್ಧಪಡಿಸಲಾಗಿದೆ.
ಇದು ಮೂರು ದಿನಗಳ ಕಾಲ ರಾಮಮೂರ್ತಿ ನಗರದಲ್ಲಿ ಸಂಚರಿಸಲಾಗಿದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಸರ್ಕಾರ, ಬಸ್ಗಳಿಗೆ ಆಕ್ಸಿಜನ್ ಅಳವಡಿಸಿ ಆಕ್ಸಿಜನ್ ಬಸ್ ಗಳಾಗಿ ಪರಿವರ್ತಿಸಲಾಗಿದೆ. ನಗರಗಳಲ್ಲಿ ಹಾಗೂ ಆಸ್ಪತ್ರೆಯ ಮುಂಭಾಗಗಳಲ್ಲಿ ಅವಶ್ಯಕ ಇರುವ ಸೋಂಕಿತರಿಗೆ ಆಕ್ಸಿಜನ್ ನೀಡುವ ಕಾರ್ಯವನ್ನು ಈ ಮೂಲಕ ಮಾಡಲಾಗಿದೆ.
ಈ ಬಸ್ ನಲ್ಲಿ ಒಂದೇ ಬಾರಿಗೆ 8 ಜನರಿಗೆ ಆಕ್ಸಿಜನ್ ನೀಡುವ ಸೌಲಭ್ಯವಿದೆ. ಹೆಚ್ಚಿನ ಅವಶ್ಯಕತೆ ಕಂಡು ಬಂದರೆ, ಅಂತಹ ರೋಗಿಗಳನ್ನು ಈ ಬಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗುತ್ತದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಅಭಾವ ನೀಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಕಾರ್ಯ ಮಾಡಿದೆ.



