ಈ ದೇಶದ ಉಪ್ಪು ತಿಂದು ಪಾಕಿಸ್ತಾನ ಜಿಂದಾಬಾದ್ ಎನ್ನುವವರ ಮನಃಸ್ಥಿತಿ ಬಾಹ್ಯ ಶತ್ರುಗಳಿಗಿಂತ ಕೆಟ್ಟದು: ಸುನಿಲ್ ಕುಮಾರ್ ಕಿಡಿ

0
Spread the love

ಉಡುಪಿ: ಈ ದೇಶದ ಉಪ್ಪು ತಿಂದು ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಈ ಮನಃಸ್ಥಿತಿ ಬಾಹ್ಯ ಶತ್ರುಗಳಿಗಿಂತ ಕೆಟ್ಟದು ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಕಿಡಿಕಾರಿದ್ದಾರೆ. ಮಂಗಳೂರಿನ ಕುಡುಪು ಎಂಬಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಮೊಹಮ್ಮದ್ ಅಶ್ರಫ್ ಎಂಬಾತನ ಮೇಲೆ ಗುಂಪು ಹಲ್ಲೆ ನಡೆಸಿರುವ ವಿಚಾರವಾಗಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು,

Advertisement

ಭಾರತದ ವಿರುದ್ಧ ಪಾಕಿಸ್ತಾನ ಯುದ್ಧದ ಬೆದರಿಕೆ ಹಾಕುತ್ತಿದೆ. ದೇಶದೊಳಗಿನ ಶತ್ರುಗಳು ಇದಕ್ಕಿಂತ ಹೆಚ್ಚು ಅಪಾಯಕಾರಿ. ಈ ದೇಶದ ಉಪ್ಪು ತಿಂದು ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಈ ಮನಃಸ್ಥಿತಿ ಬಾಹ್ಯ ಶತ್ರುಗಳಿಗಿಂತ ಕೆಟ್ಟದು ಎಂದು ಎಂದು ಟೀಕಿಸಿದ್ದಾರೆ.

ಮಸೀದಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಿಸಿದ್ದಾಯ್ತು. ವಿಧಾನಸೌಧದಲ್ಲೂ ಪಾಕ್ ಪರ ಘೋಷಣೆಯಾಯ್ತು. ಈಗ ಕ್ರಿಕೆಟ್ ಅಂಗಳದಲ್ಲೂ ಪಾಕ್ ಪ್ರೇಮ. ಇಂತಹ ದೇಶ ವಿರೋಧಿಗಳಿಗೆ ರಾಜ್ಯ ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಖಂಡಿಸಿದ್ದಾರೆ.

ಕ್ರಿಕೆಟ್ ಮೈದಾನದಲ್ಲಿ ಪಾಕ್‌ಗೆ ಜೈ ಎಂದವರ ಕೃತ್ಯ ಖಂಡಿಸಲಾಗಿದೆ. ಖಂಡಿಸಿದ ಹಿಂದೂ ಯುವಕರಿಗೆ ಪೊಲೀಸ್ ಕಿರುಕುಳವನ್ನು ಸಮಾಜ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here