ವಿಜಯಪುರ: ಪಾಕಿಸ್ತಾನಕ್ಕೆ ಜೈಕಾರ ಹಾಕುವವರಿಗೆ ಚಪ್ಪಲಿಯಿಂದ ಹೊಡೆಯಿರಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧ ನಡೆಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡವರು ಯಾರಾದರೂ ಭಾರತ ಮಾತಾಕಿ ಜೈ ಅಂದ್ರಾ,
ಪಾಕಿಸ್ತಾನಕ್ಕೆ ಧಿಕ್ಕಾರ ಕೂಗಿದ್ದಾರಾ? ಕಾಂಗ್ರೆಸ್ ಸಚಿವ, ಶಾಸಕರನ್ನು ಮುಸ್ಲಿಂ ಮುಖಂಡರು ಬ್ಲ್ಯಾಕ್ಮೇಲ್ ಮಾಡಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವವರಿಗೆ ಚಪ್ಪಲಿಯಿಂದ ಹೊಡೆಯಿರಿ. ಅವರ ಪರವಾಗಿ ನಾನು ಇರುತ್ತೇನೆ. ಅವರ ವಕಾಲತ್ತು ನಾನು ನೋಡಿಕೊಳುತ್ತೇನೆ ಎಂದರು.
ಇನ್ನೂ ಮಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ತಮ್ಮ ವಿರುದ್ಧ ಪ್ರತಿಭಟನೆ ನಡೆಸಿದ್ದ ಸಚಿವ ಹಾಗೂ ಶಾಸಕರ ವಿಚಾರವಾಗಿ ಮಾತನಾಡಿ, ಅವನು ಶಿವಾನಂದ ಪಾಟೀಲ್ ಅಲ್ಲ, ಅವನು ಶಿವಾನಂದ ಹಚಡದ.
ಅವನಿಗೆ ತಾಕತ್ ಇದ್ದರೆ ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ನನ್ನ ವಿರುದ್ಧ ಸ್ಪರ್ಧಿಸಲಿ. ಮುಂದಿನ ಶುಕ್ರವಾರದೊಳಗೆ ರಾಜೀನಾಮೆ ಕೊಡಲಿ, ನಿಮ್ಮ ಮತಕ್ಷೇತ್ರದಲ್ಲೇ ಪಕ್ಷೇತರವಾಗಿ ನಿಂತು ಆರಿಸಿ ಬರುತ್ತೇನೆ ಎಂದು ಕಿಡಿಕಾರಿದರು.