ನವದೆಹಲಿ:- ಪಹಲ್ಗಾಮ್ ದಾಳಿ ಬೆನ್ನಲ್ಲೇ ಕೇಂದ್ರ ಸರ್ಕಾರ ಜಾತಿಗಣತಿ ನಿರ್ಧಾರಕ್ಕೆ ಬಂದಿರುವುದು ಯಾಕೆ!? ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದರು.
ಕೇಂದ್ರದ ಜಾತಿ ಜನಗಣತಿ ನಿರ್ಧಾರ ಸ್ವಾಗತಿಸಿ ಮಾತನಾಡಿದ ರಾಗಾ, ಪಹಲ್ಗಾಮ್ ದಾಳಿಯ ಸಮಯದಲ್ಲೇ ಜಾತಿ ಜನಗಣತಿ ಘೋಷಣೆ ನಿರ್ಧಾರ ಯಾಕೆ ಮಾಡಿದ್ದಾರೆ ಎನ್ನುವುದು ನಂಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಸರ್ಕಾರ ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಇದು ಜನರ ಜಾತಿಗಣತಿ ಆಗಬೇಕು, ಅಧಿಕಾರಿಗಳ ಗಣತಿ ಆಗಬಾರದು. ಇದನ್ನು ಹೇಗೆ ಮಾಡ್ತಾರೆ ಎಂದು ಹೇಳಬೇಕು ಎಂದರು. ಪ್ರಧಾನಿ ಮೋದಿ ಅವರು ಕೇವಲ 4 ಜಾತಿಗಳು ಎಂದಿದ್ದರು. ಈಗ ಏಕಾಏಕಿ ಜಾತಿಗಣತಿ ಬಗ್ಗೆ ಘೋಷಣೆ ಮಾಡಿದ್ದಾರೆ. ಕೇವಲ ಮೀಸಲಾತಿ ಪ್ರಾಮುಖ್ಯತೆ ನೀಡುವುದಲ್ಲ. ಪ್ರತಿಯೊಬ್ಬರಿಗೆ ನ್ಯಾಯ ಸಿಗುವಂತೆ ಮಾಡಬೇಕಾಗಿದೆ ಎಂದು ಹೇಳಿದರು.
ಜಾತಿಗಣತಿ ಹಾಗೂ ಜನಗಣತಿಗೆ ಅವಧಿ, ಸಮಯ ನಿರ್ಧಾರ ಮಾಡಬೇಕು. ಬಜೆಟ್ನಲ್ಲಿ ಹಣವನ್ನು ನಿಗದಿಪಡಿಸಬೇಕು. ಬಜೆಟ್ನ್ನು ಹಣ ತೆಗೆದಿರಿಸುವ ಬಗ್ಗೆ ಮಾಹಿತಿ ನೀಡಬೇಕು. ನಮ್ಮ ಆಗ್ರಹ, ಒತ್ತಡಕ್ಕೆ ಪ್ರಧಾನಿ ಮೋದಿ ಅವರು ಸ್ಪಂದಿಸಿದಕ್ಕೆ ಅವರಿಗೆ ಧನ್ಯವಾದಗಳು ಎಂದು ಕೃತಜ್ಞತೆ ಸಲ್ಲಿಸಿದರು. ನಮ್ಮ ಪಕ್ಷ ಸಮೀಕ್ಷೆಗೆ ಆಗ್ರಹಿಸಿ ದೇಶದಲ್ಲೆಡೆ ಅಭಿಯಾನ ಆರಂಭಿಸಿದ್ದೆವು. ಜಾತಿಗಣತಿಯಿಂದಾಗಿ ಅಭಿವೃದ್ದಿಗೆ ಹಲವು ದಾರಿಗಳು ತೆರಯುತ್ತವೆ. ಕರ್ನಾಟಕದ ಜಾತಿಗಣತಿ ಮುಂದಿನ ದಿನಗಳಲ್ಲಿ ಮಾದರಿಯಾಗಲಿದೆ. ಪ್ರಧಾನಿ ಮೋದಿ ಕೈಗೊಂಡ ನಿರ್ಧಾರ ಮಹತ್ವದಾಗಿದೆ ಎಂದರು.



