HomeGadag Newsಭೀಷ್ಮಕೆರೆಯಲ್ಲಿ ಶೀಘ್ರ ಸೈಕ್ಲಿಂಗ್ ವ್ಯವಸ್ಥೆ

ಭೀಷ್ಮಕೆರೆಯಲ್ಲಿ ಶೀಘ್ರ ಸೈಕ್ಲಿಂಗ್ ವ್ಯವಸ್ಥೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಐತಿಹಾಸಿಕ ಭೀಷ್ಮ ಕೆರೆ ಪರಿಸರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಸುಂದರ ವಿಹಾರ ಧಾಮವನ್ನಾಗಿ ಮಾಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಬುಧವಾರ ನಗರದ ಭೀಷ್ಮ ವಿಹಾರ ಧಾಮದ ನಡುಗಡ್ಡೆಯಲ್ಲಿ ಬಸವ ಜಯಂತಿ ನಿಮಿತ್ತ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ-ಬೆಟಗೇರಿ ನಗರಸಭೆ ಸಹಯೋಗದಲ್ಲಿ ಬಸವ ಜಯಂತಿ ಅಂಗವಾಗಿ ಸಂಗೀತಗಾರ ರಾಮಚಂದ್ರ ಹಡಪದ, ಸ್ಪರ್ಶ ಇವರ ತಂಡದಿಂದ ಆಯೋಜಿಸಲಾದ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು.

ಭೀಷ್ಮ ಕೆರೆ ಆವರಣದಲ್ಲಿ ಈಗಾಗಲೇ ಬೋಟಿಂಗ್ ಆರಂಭವಾಗಿದ್ದು, ಪ್ರತಿನಿತ್ಯ 15 ಸಾವಿರ ಆದಾಯ ಸೃಷ್ಟಿಯಾಗುತ್ತಿದೆ. ಹೀಗಾಗಿ ಭೀಷ್ಮ ವಿಹಾರ ಧಾಮವನ್ನು ಮತ್ತಷ್ಟು ಆಕರ್ಷಣೀಯವಾಗಿಸಲು ಮೇ 20ರಂದು ಕೆರೆ ನೀರಿನ ಮೇಲೆ ಓಡುವ ಸೈಕಲ್ ಸವಾರಿ ಆರಂಭಿಸಲಾಗುವುದು ಎಂದರು.

ಐತಿಹಾಸಿಕ 63 ಎಕರೆ ಕೆರೆ ಅಭಿವೃದ್ಧಿ ಮಾಡಲು ಅವಕಾಶವಿದೆ. ಸದ್ಯ 33 ಎಕರೆ ಮಾತ್ರ ಅಭಿವೃದ್ಧಿ ಮಾಡಲಾಗಿದೆ. ಸರಕಾರದ ವಿವಿಧ ಇಲಾಖೆಗಳ ಜೊತೆಗೆ ಸಾರ್ವಜನಿಕರೂ ಅಭಿವೃದ್ಧಿಗೆ ಕೈ ಜೋಡಿಸಬೇಕು. ಅಂದಾಗ ಮಾತ್ರ ವಿಹಾರಧಾಮ ಮತ್ತಷ್ಟು ಸುಂದರವಾಗಲು ಸಾಧ್ಯ ಎಂದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಪ್ರಾಸ್ತಾವಿಕ ಮಾತನಾಡಿ, 116 ಅಡಿ ಎತ್ತರದ ಬಸವ ಪುತ್ಥಳಿ ಆವರಣದಲ್ಲಿ ಬಸವ ಜಯಂತಿ ಅಂಗವಾಗಿ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸುವ ಮೂಲಕ ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು.

ಸಮಾರಂಭದಲ್ಲಿ ಹೆಸರಾಂತ ಕಲಾವಿದ ರಾಮಚಂದ್ರ ಹಡಪದ್ ಅವರನ್ನು ಸಚಿವ ಎಚ್.ಕೆ. ಪಾಟೀಲ ಜಿಲ್ಲಾಡಳಿತದಿಂದ ಸತ್ಕರಿಸಿ ಗೌರವಿಸಿದರು. ಜೊತೆಗೆ ಸ್ಪರ್ಶ ಕಲಾತಂಡದ ಸರ್ವ ಸದಸ್ಯರನ್ನು ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಡಿ.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಬಸವರಾಜ ಕಡೇಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮುಂತಾದವರಿದ್ದರು. ಪ್ರೊ. ಬಾಹುಬಲಿ ಜೈನರ್ ಕಾರ್ಯಕ್ರಮ ನಿರೂಪಿಸಿದರು.

ಬಸವ ಜಯಂತಿಯಂದು ಭೀಷ್ಮ ಕೆರೆ ಆವರಣ ಇಷ್ಟೊಂದು ಸುಂದರವಾಗಲು ಪ್ರಭು ಬುರಬುರೆ, ಬಿ.ಬಿ. ಅಸೂಟಿ, ಗುರಣ್ಣ ಬಳಗಾನೂರ ಸೇರಿದಂತೆ ಹಲವರ ಆಸಕ್ತಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿದಂತೆ ಹಲವಾರು ಅಧಿಕಾರಿಗಳ ಅವಿರತ ಶ್ರಮ ಅಡಗಿದೆ. ಅವರ ಜೊತೆಗೆ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳಿಗೆ ಅಭಿನಂಧನೆಗಳನ್ನು ಸಲ್ಲಿಸುತ್ತೇನೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!