ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ: ಪೊಲೀಸರಿಂದ ಶೋಧ ಕಾರ್ಯ, FIR ದಾಖಲು!

0
Spread the love

ಚಾಮರಾಜನಗರ:- ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿ ವರದಿ ಆಗುತ್ತಿದೆ. ಅದರಂತೆ ಇಂದು ಬೆಳ್ಳಂ ಬೆಳಗ್ಗೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಇ ಮೇಲ್ ಸಂದೇಶ ಬಂದಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಬಾಂಬ್ ಬೆದರಿಕೆ ಹಿನ್ನೆಲೆ, ಪೊಲೀಸರು ಶೋಧಕಾರ್ಯ ನಡೆಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

Advertisement

ತಮಿಳುನಾಡಿನ ಬಾಂಬ್ ಬ್ಲಾಸ್ಟ್ ಪ್ರಕರಣಗಳನ್ನು ಉಲ್ಲೇಖಿಸಿ ಮೇಲ್ ಸಂದೇಶ ರವಾನೆ ಮಾಡಲಾಗಿದ್ದು, ಡಿಎಂಕೆ ನಾಯಕರ ಹೆಸರು ಉಲ್ಲೇಖಿಸಿ ಕೊನೆಯಲ್ಲಿ ಅಲ್ಲಾಹು ಅಕ್ಬರ್ ಎಂದು ಬರೆಯಲಾಗಿದೆ. ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಪೈಪ್‌ಗಳಲ್ಲಿ ಅಡಗಿಸಿಟ್ಟಿರುವ ಬಾಂಬ್‌ಗಳನ್ನು ಸ್ಫೋಟಗೊಳಿಸುವುದಾಗಿ ಅಪರಿಚಿತ ವ್ಯಕ್ತಿಯಿಂದ ಇಮೇಲ್‌ಗೆ ಬೆದರಿಕೆ ಸಂದೇಶ ಬಂದಿತ್ತು.

ಸಂದೇಶ ತಿಳಿಯುತ್ತಿದ್ದಂತೆ ಡಿಸಿ ಶಿಲ್ಪಾನಾಗ್ ಹಾಗೂ ಎಸ್ಪಿ ಡಾ.ಬಿ.ಟಿ.ಕವಿತಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡರು. ಬೆಳಗ್ಗೆ ಕಚೇರಿಯಲ್ಲಿದ್ದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಹೊರಕ್ಕೆ ಕಳುಹಿಸಿ, ಜಿಲ್ಲಾಡಳಿತ ಭವನ ಆವರಣದೊಳಕ್ಕೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಯಿತು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳವು ಜಿಲ್ಲಾಡಳಿತ ಭವನದಲ್ಲಿ ಶೋಧ ಕಾರ್ಯ ನಡೆಸಿದೆ.


Spread the love

LEAVE A REPLY

Please enter your comment!
Please enter your name here