ಗದಗ:- ಜಿಲ್ಲೆಯಲ್ಲಿ ಸರಗಳ್ಳರ ಗ್ಯಾಂಗ್ ಫುಲ್ ಆ್ಯಕ್ಟೀವ್ ಆಗಿದ್ದು, ಒಂದೇ ದಿನ ಐದು ಜನ ಮಹಿಳೆಯರ ತಾಳಿಸರ ಕಿತ್ತುಕೊಂಡು ಖದೀಮರು ಎಸ್ಕೇಪ್ ಆಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಜರುಗಿದೆ.
Advertisement
ಎಸ್, ಇಲ್ಲಿನ ಅಕ್ಕಿಗುಂದ ಗ್ರಾಮಕ್ಕೆ ಹೋಗಲು ಬಸ್ ನಿಲ್ದಾಣಕ್ಕೆ ಬಂದಿದ್ದ ಕೀರ್ತನ ಕೊಡ್ಲಿ ಎಂಬ ಮಹಿಳೆ ಸೇರಿ ಐದು ಮಹಿಳೆಯ ಚಿನ್ನದ ತಾಳಿ ಸರ ಕದ್ದು ಕಳ್ಳರು ಎಸ್ಕೇಪ್ ಆಗಿದ್ದಾರೆ. ಅಕ್ಕಿಗುಂದ ಗ್ರಾಮಕ್ಕೆ ಹೋಗಲು ಬಸ್ ಹತ್ತುವಾಗ ಕಳ್ಳರು ಕೈಚಳಕ ತೋರಿದ್ದಾರೆ. ಕಳ್ಳರ ಕೃತ್ಯದಿಂದ ಕೊರಳಲ್ಲಿ ತಾಳಿ ಇಲ್ಲದೆ ಮಹಿಳೆಯರು ಕಂಗಾಲಾಗಿದ್ದಾರೆ.
ಬಸ್ ನಿಲ್ದಾಣದಲ್ಲಿ ಪೊಲೀಸ್ ಕಾವಲು ನಡುವೆಯೂ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.