ರಾಮನಗರ:- ಹಾಡಹಗಲೇ ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ನ ಬರ್ಬರ ಕೊಲೆ ಆಗಿರುವ ಘಟನೆ ಹಾರೋಹಳ್ಳಿ ಪಟ್ಟಣದ ಕೆಎಸ್ಆರ್ಟಿಸಿ ಬಸ್ ಡಿಪೋ ಬಳಿ ಜರುಗಿದೆ. 33 ವರ್ಷದ ಸಂತೋಷ್ ಅಲಿಯಾಸ್ ಕರಡಿ ಹತ್ಯೆಯಾದ ವ್ಯಕ್ತಿ.
Advertisement
ಬೆಂಗಳೂರಿನ ಹಲವು ಠಾಣೆಗಳಲ್ಲಿ ಮೃತ ವ್ಯಕ್ತಿ ಮೇಲೆ ಕ್ರಿಮಿನಲ್ ಕೇಸ್ ಗಳಿದ್ದು, ಹಳೇ ವೈಷಮ್ಯಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಾರಿನಿಂದ ಬೈಕ್ಗೆ ಗುದ್ದಿ ಆತ ಕೆಳಗೆ ಬಿದ್ದ ಬಳಿಕ ಲಾಂಗು ಮಚ್ಚು ಹಿಡಿದು ಅಟ್ಟಾಡಿಸಿರೋ ನಾಲ್ವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಎಸ್ಪಿ ಶ್ರೀನಿವಾಸ್ ಗೌಡ ಭೇಟಿ, ಪರಿಶೀಲನೆ ನಡೆಸಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.