ಗ್ಯಾರಂಟಿ ಯೋಜನೆಗಳು ಬಡವರ ಬಾಳಿನ ಬೆಳಕು

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ರಾಜ್ಯ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡವರ ಬದುಕು ಉಜ್ವಲಗೊಂಡಿದೆ ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಎಸ್. ಪಾಟೀಲ ಹೇಳಿದರು.

Advertisement

ಅವರು ಶನಿವಾರ ತಾ.ಪಂ ಸಭಾಂಗಣದಲ್ಲಿ ನವೀಕೃತಗೊಂಡ ನೂತನ ಗ್ಯಾರಂಟಿ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಗ್ಯಾರಂಟಿ ಯೋಜನೆಗಳಿಗೆ ಸರಕಾರ 52 ಸಾವಿರ ಕೋಟಿರೂಗಳನ್ನು ಖರ್ಚು ಮಾಡುತ್ತಿದೆ. ಇದರಿಂದ ಬಡ ಕುಟುಂಬಗಳು ನೆಮ್ಮದಿಯ ಜೀವನ ನಡೆಸುತ್ತಿವೆ. ಮುಖ್ಯವಾಗಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ಪಾಲಕರು ನೀಡುತ್ತಿರುವುದು ಮಹತ್ವದ ಬೆಳವಣಿಗೆಯಾಗಿದ್ದು, ಇಂದು ಇಡೀ ದೇಶ ಗ್ಯಾರಂಟಿ ಯೋಜನೆಗಳತ್ತ ಮುಖ ಮಾಡಿದೆ ಎಂದರು.

ಬಿಜೆಪಿಯವರು ಬಡವರಿಗೆ ಆಸರೆಯಾಗುವ ಯೋಜನೆಗಳನ್ನು ವಿರೋಧಿಸುತ್ತ ಅಪಹಾಸ್ಯ ಮಾಡುತ್ತಿದ್ದರು. ವಿಪರ್ಯಾಸವೆಂದರೆ, ಅವರ ಪಕ್ಷದ ಪ್ರಧಾನಿಗಳೇ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದರು, ಅನೇಕ ರಾಜ್ಯಗಳಲ್ಲಿ ಜಾರಿಗೆ ತಂದರು ಎನ್ನುವುದನ್ನು ಬಿಜೆಪಿಯವರು ಮರೆಯಬಾರದು ಎಂದರು.

ವಿಶ್ವ ಸಂಸ್ಥೆ ಕೂಡ ಕರ್ನಾಟಕ ಕಾಂಗ್ರೆಸ್ ನೇತೃತ್ವದ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸಂಶೆ ವ್ಯಕ್ತಪಡಿಸಿ, ಈ ಯೋಜನೆಗಳು ಬಡವರ ಬಾಳಿಗೆ ಬೆಳಕು ನೀಡಿವೆ ಎಂದಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಬಡವರ ಪರವಾಗಿದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ ಎಂದರು.

ಗ್ಯಾರAಟಿ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲ, ತಹಸೀಲ್ದಾರ ನಾಗರಾಜ ಕೆ, ತಾ.ಪಂ ಇಒ ಚಂದ್ರಶೇಖರ ಕಂದಕೂರ, ವಿ.ಆರ್. ಗುಡಿಸಾಗರ, ವೀರಣ್ಣ ಶೆಟ್ಟರ, ಯೂಸುಪ್ ಇಟಗಿ, ಬಸವರಾಜ ನವಲಗುಂದ, ಗೀತಾ ಮಾಡಲಗೇರಿ, ದುರ್ಗಪ್ಪ ಹಿರೇಮನಿ ಸೇರಿದಂತೆ ಪುರಸಭೆ ಹಾಗೂ ಗ್ಯಾರಂಟಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here