ಕಾಳಸಂತೆಯಲ್ಲಿ RCB Vs CSK ಟಿಕೆಟ್ ಮಾರಾಟ: ನಾಲ್ವರು ಬಂಧಿಸಿದ ಖಾಕಿ!

0
Spread the love

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಆರ್‌ಸಿಬಿ vs ಸಿಎಸ್‌ಕೆ ನಡುವಿನ ಪಂದ್ಯದ ಟಿಕೆಟ್ ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.

Advertisement

ಬಂಧಿತರಿಂದ 32 ಟಿಕೆಟ್‌ಗಳು ಹಾಗೂ 1 ಲಕ್ಷ ನಗದನ್ನು ಜಪ್ತಿ ಮಾಡಿದ್ದಾರೆ. ಚರಣ್ ರಾಜ್, ಹರ್ಷವರ್ಧನ ಸಕ್ಲೇಚ, ವಿನಯ್, ವೆಂಕಟಸಾಯಿ ಬಂಧಿತ ಆರೋಪಿಗಳು. ಪ್ರೇಕ್ಷಕರ ಅಗತ್ಯತೆಯನ್ನೇ ಬಂಡವಾಳ ಮಾಡಿಕೊಂಡಿದ್ದ ಆರೋಪಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಿಂತು 1,200 ರೂ. ಬೆಲೆಯ ಟಿಕೆಟ್‌ ಅನ್ನು 10,000 ರೂ.ಗೆ ಮಾರಾಟ ಮಾಡುತ್ತಿದ್ದರು. ಮಾಹಿತಿ ತಿಳಿದ ಸಿಸಿಬಿ ವಿಶೇಷ ತಂಡ ಟಿಕೆಟ್‌ ಖರೀದಿಸುವ ನೆಪದಲ್ಲಿ ಬಂದು ದಂಧೆಕೋರರನ್ನ ಬಂಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here