1 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಕ್ಫ್ ಅಧಿಕಾರಿ ‘ಲೋಕಾ’ ಬಲೆಗೆ!

0
Spread the love

ಗದಗ:- ಒಂದು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ವಕ್ಫ್ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ರೆಹಮತ್ತುಲ್ಲಾ ಪೆಂಡಾರಿ ಲೋಕಾ ಬಲೆಗೆ ಬಿದ್ದ ಅಧಿಕಾರಿ.

Advertisement

ಗದಗ ತಾಲೂಕಿನ ಮುಳಗುಂದ ಪಟ್ಟಣದ ಮಸೀದಿಗೆ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಪತ್ರ ರವಾನಿಸಲು ಅಧಿಕಾರಿ ರೆಹಮತ್ತುಲ್ಲಾ ಅವರು ಎಸ್ ಎ ಮಕಾನದಾರ್ ಬಳಿ ಮೊದಲು ಐದು ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ಮೂರು ಸಾವಿರ ಕೇಳಿದ್ದರು. ಕೊನೆಗೆ ಒಂದು ಸಾವಿರ ರೂಪಾಯಿ ಕೊಡುವುದಾಗಿ ಹೇಳಿದ್ದ ಮಕಾನದಾರ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದರು.

ದೂರಿನ ಅನ್ವಯ ಲೋಕಾಯುಕ್ತ ಎಸ್ ಪಿ ಹನಮಂತರಾಯ ಮಾರ್ಗದರ್ಶನದಲ್ಲಿ ಡಿವೈಎಸ್ ಪಿ ವಿಜಯ್ ಬಿರಾದಾರ್ ತಂಡದಿಂದ ನಡೆದ ಕಾರ್ಯಾಚರಣೆ ವೇಳೆ ವಕ್ಫ್ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಇನ್ಸ್‌ಪೆಕ್ಟರ್‌ಗಳಾದ ಪರಮೇಶ ಕವಟಗಿ, ಶ್ರೀಮತಿ ತೇಲಿ ಹಾಗೂ ಸಿಬ್ಬಂದಿಗಳಾದ ಅಯ್ಯನಗೌಡ್ರ, ದೀಪಾಲಿ, ಗಾರ್ಗಿ, ನೀಲಕಂಠಪ್ಪ ಹಾಗೂ ಹಸನ ಈ ಕಾರ್ಯಾಚರಣೆಯಲ್ಲಿ ಇದ್ದರು.


Spread the love

LEAVE A REPLY

Please enter your comment!
Please enter your name here