ಗೋವಾ ರಾಜ್ಯಕ್ಕೆ ಹೆದರಿಕೊಂಡು ಮೋದಿಯವರು ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ: ಸಿಎಂ ಸಿದ್ಧರಾಮಯ್ಯ ಆರೋಪ

0
Spread the love

ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಮೋದಿಯವರು ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಯಾಕೆ ಕೊಡಿಸ್ತಿಲ್ಲಾ..?

Advertisement

ಗೋವಾಕ್ಕೆ ಹೆದರಿಕೊಂಡು ಮೋದಿ ಅವರು ಅನುಮತಿ ಕೊಡಿಸ್ತಿಲ್ಲಾ. ಪ್ರಹ್ಲಾದ್ ಜೋಶಿ ಆ ಬಗ್ಗೆ ಅವರ ಮುಂದೆ ಮಾತಾಡ್ತಿಲ್ಲಾ. ನಾವು ಅನೇಕ ಸಲ ಕೇಂದ್ರಕ್ಕೆ ಹೋಗಿ ಮನವಿ ಮಾಡಿದ್ದೇವೆ. ಆದರೂ ಪ್ರಯೋಜನವಾಗಿಲ್ಲ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಹಿನ್ನೆಲೆ ಮೇ 20ಕ್ಕೆ ವಿಜಯನಗರ ದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ. ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುತ್ತೇವೆ ಎಂದು ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿದರು.


Spread the love

LEAVE A REPLY

Please enter your comment!
Please enter your name here