ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ 56 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ಗುಜರಾತ್ ಟೈಟಾನ್ಸ್ (ಜಿಟಿ) ತಂಡವನ್ನು ಎದುರಿಸಲಿದೆ. ಈ ಪಂದ್ಯವು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಂಜೆ 7:30 ಕ್ಕೆ ಪ್ರಾರಂಭವಾಗಲಿದೆ.
ಇದರ ನಡುವೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ಗೆ ವಜ್ರದ ಉಂಗುರವನ್ನು ಹಸ್ತಾಂತರಿಸಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾ ಆಟಗಾರರಿಗೆ ಬಿಸಿಸಿಐ ವಜ್ರದ ಉಂಗುರವನ್ನು ಉಡುಗೊರೆಯಾಗಿ ಘೋಷಿಸಿತ್ತು.
ಬಿಸಿಸಿಐನ ನಮನ್ ಪ್ರಶಸ್ತಿ ಸಮಾರಂಭದಲ್ಲಿ ಈ ಉಡುಗೊರೆಯನ್ನು ನೀಡಲಾಗಿತ್ತು. ಆದರೆ ಮೊಹಮ್ಮದ್ ಸಿರಾಜ್ ಆಗ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇದೀಗ ಸಿರಾಜ್ಗೆ ರೋಹಿತ್ ಶರ್ಮಾ ವಜ್ರದುಂಗುರವನ್ನು ಹಸ್ತಾಂತರಿಸಿದ್ದಾರೆ. ಈ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.
ಇನ್ನು ಈ ವಜ್ರದ ಉಂಗುರವು 60 ಗ್ರಾಂ 18 ಕ್ಯಾರೆಟ್ ಚಿನ್ನವನ್ನು ಸಹ ಒಳಗೊಂಡಿದೆ. ಅಲ್ಲದೆ ಉಂಗುರದ ಮೇಲೆ ಆಟಗಾರನ ಹೆಸರು ಮತ್ತು ಜೆರ್ಸಿ ಸಂಖ್ಯೆಯನ್ನು ಬರೆಯಲಾಗಿದೆ. ಇದಲ್ಲದೆ, 2024 ರ ಟಿ 20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಯಾವ ತಂಡವನ್ನು ಎಷ್ಟು ರನ್ ಅಥವಾ ವಿಕೆಟ್ಗಳಿಂದ ಸೋಲಿಸಿದೆ ಎಂಬುದನ್ನು ಸಹ ಈ ಉಂಗುರದ ಮೇಲೆ ಬರೆಯಲಾಗಿರುವುದು ವಿಶೇಷ.