ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯ ಹುಬ್ಬಳ್ಳಿ ವತಿಯಿಂದ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ದತ್ತು ಗ್ರಾಮವಾದ ಹೊಸಳ್ಳಿಯಲ್ಲಿ ನಡೆಯಿತು.
Advertisement
ಪ್ರಾಚಾರ್ಯೆ ಪಲ್ಲವಿ ಬುಯ್ಯಾರ ಶಿಬಿರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷೀಯ ಭಾಷಣದಲ್ಲಿ ಹುಲಕೋಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಆರ್.ಎಂ. ಮೂಲಿಮನಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಿ.ಎಸ್. ಅಂಗಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಉಪನ್ಯಾಸಕರಾದ ಎಸ್.ಐ. ಅಣ್ಣಿಗೇರಿ, ಎಂ.ವಿ. ಹಿರೇಮಠ, ವಿಶ್ವನಾಥ ಹಿರೇಮಠ, ಮಹಾಂತೇಶ ಮಡ್ಡಿ, ಉಪನ್ಯಾಸಕರಾದ ಎನ್.ಎನ್. ಮುಲ್ಲಾ, ಎ.ಆರ್. ಕೇರಿ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಮಹಾಂತೇಶ ಅಂ.ಕೂರಡಕೇರಿ, ಕುಮಾರ ಮಂಜುನಾಥ ದೇಸಾಯಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.