HomeUncategorizedನೂತನ ಜಿಲ್ಲೆಯಾದರೂ ಸಾಧನೆಯಲ್ಲಿ ಮುಂದೆ

ನೂತನ ಜಿಲ್ಲೆಯಾದರೂ ಸಾಧನೆಯಲ್ಲಿ ಮುಂದೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪಂಚ ಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯವಾಗಿದೆ ಎಂದು ರಾಜ್ಯದ ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಗದಗ ಜಿಲ್ಲೆಯಲ್ಲಿ ಶೇ 98.2ರಷ್ಟು ಪ್ರಮಾಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ತಲುಪಿದೆ. ಇನ್ನು 15 ದಿನಗಳಲ್ಲಿ ಶೇ 99ರಷ್ಟು ತಲುಪುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರಲ್ಲದೆ, ಗದಗ ಜಿಲ್ಲೆ ನೂತನ ಜಿಲ್ಲೆಯಾದರೂ ಸಾಧನೆಯಲ್ಲಿ, ಅಭಿವೃದ್ಧಿಯಲ್ಲಿ ಹಿಂದೆ ಉಳಿದಿಲ್ಲ ಎಂದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಮಾತನಾಡಿ, ಗದಗ ಜಿಲ್ಲೆಯೊಂದಿಗೆ ಮೊದಲಿನಿಂದಲೂ ಅವಿನಾಭಾವ ಸಂಬಂಧವಿದ್ದು, ವಿದ್ಯಾರ್ಥಿ ನಾಯಕನಾಗಿದ್ದಾಗ ಸಹಕಾರಿ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲರ ಶಿಷ್ಯ ಮತ್ತು ಅಭಿಮಾನಿಯಾಗಿದ್ದೆ ಎಂದರು.

ಗೃಹಲಕ್ಷ್ಮೀ ಯೋಜನೆಯಿಂದ ಪಡೆದ ಹಣವನ್ನು ಕೂಡಿಟ್ಟು ಬೋರ್‌ವೆಲ್ ಕೊರೆಸಿರುವ ಉದಾಹರಣೆಗಳು ಗದಗ ಜಿಲ್ಲೆಯಲ್ಲಿ ಇವೆ. ಗೃಹಲಕ್ಷ್ಮೀಯಿಂದ ಮಹಿಳೆಯರ ಸಬಲೀಕರಣವಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು ನಿರಂತರವಾಗಿ ಮುಂದುವರೆಯಲಿವೆ ಎಂದು ನುಡಿದರು.

ನರಗುಂದ ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ನಾವೇನು ಗ್ಯಾರಂಟಿ ಯೋಜನೆಗಳ ವಿರೋಧಿಗಳಲ್ಲ. ಗ್ಯಾರಂಟಿ ಯೋಜನೆಯಿಂದಾಗಿ ಅಭಿವೃದ್ಧಿ ಸ್ಪಲ್ಪ ಕುಂಠಿತವಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಬೇಕಾದ ಅನುದಾನವನ್ನು ಬಿಡುಗಡೆಗೊಳಿಸಿ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, 2-3 ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗುತ್ತಿವೆ. ಆದಷ್ಟು ಬೇಗ ಯೋಜನೆಯ ಹಣ ಬಿಡುಗಡೆಗೊಳಿಸಿ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಸಿದ ಎಚ್.ಎಂ. ರೇವಣ್ಣ, ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಲ್ಲಿ ಶೇ.18ರಷ್ಟು ಖರೀದಿ ಸಾಮರ್ಥ್ಯ ಹೆಚ್ಚಾಗಿದೆ. ಜಿಡಿಪಿಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಮುಂದಿದೆ ಮತ್ತು ಗ್ಯಾರಂಟಿಯಿಂದಾಗಿ ಅಭಿವೃದ್ಧಿ ಕುಂಠಿತವಾಗಿಲ್ಲ ಎಂದು ಹೇಳಿದರು.

ಈ ಸಂರ್ಭದಲ್ಲಿ ರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಶಾಸಕ ಡಾ. ಚಂದ್ರು ಲಮಾಣಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಮಾಜಿ ಶಾಸಕ ಡಿ.ಆರ್. ಪಾಟೀಲ, ಎಸ್.ಎನ್. ಬಳ್ಳಾರಿ, ಎಂ.ಡಿ. ಮಕಾನದಾರ, ಪ್ರಭು ಮೇಟಿ, ಅಶೋಕ ಮಂದಾಲಿ, ಶಾರದಾ ಹಿರೇಗೌಡರ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿದಂತೆ ಗಣ್ಯರು, ಅಧಿಕಾರಿಗಳು ಹಾಜರಿದ್ದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಚುನಾವಣೆಗಳಿಗಾಗಿ ಜಾರಿಗೆ ತಂದಿರುವುದಲ್ಲ. ಬಡ ಜನರ ಏಳಿಗೆಗಾಗಿ ಬಂಗಾರಪ್ಪ, ಮೋಯ್ಲಿ ಸೇರಿದಂತೆ ಸಿದ್ಧರಾಮಯ್ಯ ಅವರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಸರ್ಕಾರ ರಚನೆಯಾಗಿ ಮೊದಲ ಕ್ಯಾಬಿನೆಟ್‌ನಲ್ಲಿಯೇ ಪಂಚ ಗ್ಯಾರಂಟಿ ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದ್ದೇವೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.

“ಪಿಯುಸಿಯಲ್ಲಿ 31ನೇ ಸ್ಥಾನದಿಂದ 25ನೇ ಸ್ಥಾನಕ್ಕೆ ತಲುಪಿದ್ದೇವೆ. ಎಸ್‌ಎಸ್‌ಎಲ್‌ಸಿಯಲ್ಲಿ 17ನೇ ಸ್ಥಾನವನ್ನು ಪುನಃ ಕಾಯ್ದುಕೊಳ್ಳುವಲ್ಲಿ ಯಶ್ವಸಿಯಾಗಿದ್ದೇವೆ. ಜನತಾ ದರ್ಶನದ ಮೂಲಕ ಬಂದ 2000 ಅರ್ಜಿಯಲ್ಲಿ 1900 ಸಮಸ್ಯೆಗಳನ್ನು ಪರಿಹರಿಸಿದ್ದು, ಉಳಿದ ಅರ್ಜಿಗಳನ್ನು ಮುಂದಿನ ಹಂತದಲ್ಲಿ ಪರಿಹರಿಸಲು ಕ್ರಮವಹಿಸಲಾಗುವುದು”

– ಎಚ್.ಕೆ. ಪಾಟೀಲ.

ಜಿಲ್ಲಾ ಉಸ್ತುವಾರಿ ಸಚಿವರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!