ಆದಿಚುಂಚನಗಿರಿ ಮಠದ ಬಳಿ ದುರಂತ: ಕಾರೊಂದು ಬೆಂಕಿಗಾಹುತಿ, ತಪ್ಪಿದ ದುರಂತ!

0
Spread the love

ಮಂಡ್ಯ:- ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಹೊರಟಿದ್ದ ಪ್ರವಾಸಿಗರ ಕಾರೊಂದು ಹೊತ್ತಿ ಉರಿದ ಘಟನೆ ಜರುಗಿದೆ.

Advertisement

ಬೆಂಗಳೂರಿನಿಂದ ಆದಿಚುಂಚನಗಿರಿಗೆ ಕುಟುಂಬವೊಂದು ಕಾರಿನಲ್ಲಿ ಹೊರಟಿತ್ತು. ಕಾರನ್ನು ಮಹಿಳೆ ಚಲಾಯಿಸುತ್ತಿದ್ದರು. ಕಾರು ಆದಿಚುಂಚನಗಿರಿ ಸಮೀಪ ಬಂದಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಮಹಿಳೆ, ಹಾಗೂ ಆಕೆಯ ಪತಿ ಮಗುವನ್ನು ಕರೆದುಕೊಂಡು ಕಾರಿನಿಂದ ಇಳಿದಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಕುಟುಂಬ ಪಾರಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here