ಉಡುಪಿ:– ಕಾಂತಾರಾ-2 ಸೆಟ್ನಲ್ಲಿ ದುರಂತ ಒಂದು ಸಂಭವಿಸಿದ್ದು, ನದಿಯಲ್ಲಿ ಮುಳುಗಿ ಜೂನಿಯರ್ ಆರ್ಟಿಸ್ಟ್ ಸಾವನ್ನಪ್ಪಿದ್ದಾರೆ. ಈ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ನಡೆದಿದೆ.
Advertisement
ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ನೀರಿನಲ್ಲಿ ಮುಳುಗಿ ಸಾವಿಗೀಡಾದ ದುರ್ದೈವಿ. ಕೊಲ್ಲೂರು ಸೌಪರ್ಣಿಕ ನದಿಯಲ್ಲಿ ಮುಳುಗಿ ಕಪಿಲ್ ಸಾವಿಗೀಡಾಗಿದ್ದಾರೆ. ಚಿತ್ರೀಕರಣ ಮುಗಿಸಿ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.