ಮತ್ತೊಮ್ಮೆ ಮಾನವೀಯತೆಗೆ ಹೆಸರಾದ ಕಿಂಗ್ ಕೊಹ್ಲಿ!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಕೊರೊನಾ ತಾಂಡವಾಡುತ್ತಿರುವ ದಿನದಿಂದಲೂ ಮಾನವೀಯತೆ ಪ್ರದರ್ಶಿಸುತ್ತಿದ್ದಾರೆ. ಸದ್ಯ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ್ತಿಗೆ ಸಹಾಯ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ್ತಿ ಶ್ರಾವಂತಿ ನಾಯ್ಡು ಅವರ ತಾಯಿಯ ಚಿಕಿತ್ಸೆಗೆ ರೂ. 6.77 ಲಕ್ಷ ನೆರವು ನೀಡಿದ್ದಾರೆ. ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದ ಅವರು ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿದ್ದರು. ಈ ವಿಷಯ ಕೇಲುತ್ತಿದ್ದಂತೆ ವಿರಾಟ್ ಕೊಹ್ಲಿ ಸಹಾಯ ಮಾಡಿದ್ದಾರೆ.

ಮಾಜಿ ಸ್ಪಿನ್ ಬೌಲರ್ ಶಿವಲಾಲ್ ಯಾದವ್ ಅವರ ಸಹೋದರಿ ಹಾಗೂ ಬಿಸಿಸಿಐ ದಕ್ಷಿಣ ವಲಯ ಸಂಯೋಜಕಿ ಎನ್. ವಿದ್ಯಾ ಯಾದವ್ ಅವರು ಶ್ರಾವಂತಿ ನಾಯ್ಡು ಅವರ ತಾಯಿ ಅನುಭವಿಸುತ್ತಿದ್ದ ಆರ್ಥಿಕ ತೊಂದರೆಯ ಬಗ್ಗೆ ಟ್ವೀಟ್ ಮಾಡಿ ಗಮನ ಸೆಳೆದಿದ್ದರು. ಅಲ್ಲದೇ, ಈ ಟ್ವೀಟ್ ನ್ನು ವಿರಾಟ್ ಕೊಹ್ಲಿಗೆ ಟ್ಯಾಗ್ ಮಾಡಿದ್ದರು. ಆಟ ಟ್ವೀಟ್ ಅನ್ನು ವಿರಾಟ್ ಕೊಹ್ಲಿಗೆ ಟ್ಯಾಗ್ ಮಾಡಿದ್ದರು.

ಸುಮನ್ ಅವರ ಕೋವಿಡ್ ಚಿಕಿತ್ಸೆಗೆಂದು ಅದಾಗಲೇ ರೂ. 16 ಲಕ್ಷ ರೂಪಾಯಿ ಖರ್ಚು ಮಡಲಾಗಿದೆ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ಕೊಹ್ಲಿ ಅವರು ಹಣದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.


Spread the love

LEAVE A REPLY

Please enter your comment!
Please enter your name here