ಭಾರತ ಮರೆಯಲ್ಲ..ಕ್ಷಮಿಸಲ್ಲ..ಆಪರೇಷನ್ ಸಿಂಧೂರ್ ಬಳಿಕ ಕಿಚ್ಚ ಹೇಳಿದ್ದೇನು..?

0
Spread the love

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಇದರ ಅಡಿಯಲ್ಲಿ ರಾತ್ರೋರಾತ್ರಿ ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ.

Advertisement

ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಕೇವಲ 23 ನಿಮಿಷದಲ್ಲಿ ಪಾಕ್​ನ 9 ನೆಲೆಯನ್ನು ಉಡೀಸ್​ ಮಾಡಿದೆ. ಅದರಲ್ಲಿ ಬರೋಬ್ಬರಿ 80ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ. ಇನ್ನೂ ಈ ವಿಚಾರವಾಗಿ ಕಿಚ್ಚ ಸುದೀಪ್ ಭಾರತೀಯ ಸೇನೆ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ಎಕ್ಸ್‌ನಲ್ಲಿ ಸುದೀಪ್, ಒಬ್ಬ ಭಾರತೀಯನಾಗಿ ಈ ಪವಿತ್ರ ಮಣ್ಣಿನ ಮಗನಾಗಿ, ಪಹಲ್ಗಾಮ್‌ನಲ್ಲಿ ನಡೆದ ಘಟನೆಯಿಂದ ನೋವು ಅನುಭವಿಸಿದೆ. ಇಂದು ನ್ಯಾಯ ಸಿಕ್ಕಿದೆ ಎಂದು ಸುದೀಪ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಅದರಂತೆಯೇ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕೇವಲ ಒಂದು ಧ್ಯೇಯವಲ್ಲ.

ಇದು ಪವಿತ್ರ ಪ್ರತಿಜ್ಞೆ. ಉಗ್ರರು ದಾಳಿ ಮಾಡುವ ಮೂಲಕ ಭಾರತದ ಸಿಂಧೂರಕ್ಕೆ ಅಪಮಾನ ಮಾಡಲಾಗಿತ್ತು. ಆದರೆ ನಮ್ಮ ಧೈರ್ಯಶಾಲಿ ಸೈನಿಕರು ನಿಖರತೆಯಿಂದ ಅದರ ಗೌರವವನ್ನು ಪುನಃಸ್ಥಾಪಿಸಿದ್ದಾರೆ. ನಮ್ಮ ಸಶಸ್ತ್ರ ಪಡೆಗಳಿಗೆ ನನ್ನ ವಂದನೆಗಳು ಎಂದಿದ್ದಾರೆ.

ನಮ್ಮ ಗೌರವಾನ್ವಿತ ಪ್ರಧಾನಿಗಳು ರಕ್ಷಣಾ ನಾಯಕತ್ವಕ್ಕೆ, ಎತ್ತರವಾಗಿ, ದೃಢವಾಗಿ ಮತ್ತು ನಿರ್ಭೀತವಾಗಿ ನಿಂತಿದ್ದಕ್ಕಾಗಿ ಧನ್ಯವಾದಗಳು. ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ಕಾರ್ಯಕ್ಕಾಗಿ ವಂದನೆಗಳು. ಭಾರತ ಮರೆಯುವುದಿಲ್ಲ. ಭಾರತ ಕ್ಷಮಿಸುವುದಿಲ್ಲ. ಜೈ ಹಿಂದ್ ಎಂದು ಕಿಚ್ಚ ಸುದೀಪ್ ಬರೆದುಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here