ವಿಜಯಸಾಕ್ಷಿ ಸುದ್ದಿ, ಗದಗ: 2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ನ್ನು ಮೇ 26ರಿಂದ ಜೂನ್ 02ರವರೆಗೆ ನಡೆಸಲಾಗುತ್ತದೆ. ಪ್ರಪ್ರಥಮ ಬಾರಿಗೆ ಪರೀಕ್ಷೆಗೆ ನೋಂದಣಿಯಾಗುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ 10 ಕೊನೆಯ ದಿನವಾಗಿದ್ದು, ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಗದಗ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡು ಪರೀಕ್ಷೆ-2 ಬರೆಯುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.



