ಆಪರೇಷನ್ ಸಿಂಧೂರ: ರಾಜ್ಯ ಸರ್ಕಾರದಿಂದ ತುರ್ತು ಆದೇಶ..ಏನದು?

0
Spread the love

ಬೆಂಗಳೂರು :- ಆಪರೇಷನ್​ ಸಿಂಧೂ ಬೆನ್ನಲ್ಲೇ ರಾಜ್ಯ ಸರ್ಕಾರ ತುರ್ತು ಆದೇಶ ಹೊರಡಿಸಿದೆ. ರಾಷ್ಟ್ರದ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಎಲ್ಲಾ ಅಣೆಕಟ್ಟುಗಳಿಗೆ ಬಿಗಿ ಭದ್ರತೆ ನೀಡುವಂತೆ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಸತ್ಯಮೂರ್ತಿ ಬಿ.ಕುಲಕರ್ಣಿ ಆದೇಶ ಹೊರಡಿಸಿದ್ದಾರೆ.

Advertisement

ಹೀಗಾಗಿ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ಹೆಚ್ಚಿನ ಭದ್ರತೆ ಒದಗಿಸಲು ಆದೇಶ ನೀಡಲಾಗಿದೆ. ತಮ್ಮ ನಿಗಮ ಮತ್ತು ವಲಯ ವ್ಯಾಪ್ತಿಯಲ್ಲಿ ಬರುವ ಅಣೆಕಟ್ಟುಗಳಿಗೆ ಭದ್ರತೆ ನೀಡಿ ಆದೇಶ ಬೆನ್ನಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ. ಹೀಗಾಗಿ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲು ಆದೇಶ ನೀಡಿದ್ದಾರೆ. ಅಲ್ಲದೇ ಒಂದು ವೇಳೆ ಭದ್ರತೆಯಲ್ಲಿ ಯಾವುದೇ ಚ್ಯುತಿಯಾದಲ್ಲಿ, ಸಂಬಂಧಪಟ್ಟ ಯೋಜನಾಧಿಕಾರಿ ಅಥವಾ ಅಣೆಕಟ್ಟು ಅಧಿಕಾರಿಗಳೇ ಹೊಣೆಗಾರರು ಎಂದು ಎಚ್ಚರಿಕೆ ನೀಡಲಾಗಿದೆ. ರಾಜ್ಯದ 17 ಅಣೆಕಟ್ಟುಗಳ ಮುಖ್ಯ ಎಂಜಿನಿಯರ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ಖಡಕ್​ ಸೂಚನೆ ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here