ಕೊಪ್ಪಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಿಂದಾಗಿ ಲಕ್ಷಾಂತರ ಬಡವರು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಈ ಹಿಂದೆ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಖರೀದಿ ಮಾಡಿರೋದು, ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿದ್ದು,
Advertisement
ಸೊಸೆಗೆ ಅತ್ತೆಯೊಬ್ಬರು ಫ್ಯಾನ್ಸಿ ಅಂಗಡಿ ಹಾಕಿಕೊಟ್ಟಿರೋದು, ಬಡ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದಲ್ಲಿ ತನ್ನ ಗಂಡನ ಕಣ್ಣಿನ ಆಪರೇಷನ್ ಮಾಡಿಸಿದ್ದು ಸುದ್ದಿಯಾಗಿತ್ತು.
ಸದ್ಯ ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ವೃದ್ಧೆ ಹನುಮವ್ವ ಎಂಬುವರು ಗೃಹ ಲಕ್ಷ್ಮಿ ಹಣ ಕೂಡಿಟ್ಟು, ತಮ್ಮ ಜಮೀನಿನಲ್ಲಿ ಈ ಹಣದಲ್ಲಿ ಬೋರವೆಲ್ ಕೊರೆಸಿದ್ದಾರೆ. ಬೊರವೆಲ್ಗೆ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದ್ದಾರೆ. ಬೋರವೆಲ್ನಲ್ಲಿ ಮೂರು ಇಂಚಿನಷ್ಟು ನೀರು ಚಿಮ್ಮಿದೆ. ವೃದ್ಧೆ ಹನುಮವ್ವ ತಳವಾರ ಸಂತಸಗೊಂಡಿದ್ದಾರೆ.