HomeIndia Newsಮಹಾಮಾರಿಗೆ ರಾಜ್ಯದಲ್ಲಿ ಎಷ್ಟು ಜನ ಮಕ್ಕಳು ಬಲಿಯಾಗಿದ್ದಾರೆ? ಎಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ?

ಮಹಾಮಾರಿಗೆ ರಾಜ್ಯದಲ್ಲಿ ಎಷ್ಟು ಜನ ಮಕ್ಕಳು ಬಲಿಯಾಗಿದ್ದಾರೆ? ಎಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ?

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಮಹಾಮಾರಿ ದೊಡ್ಡ ಪೀಡುಗಾಗಿದೆ. ವಯಸ್ಸಾದವರನ್ನೇ ಹೆಚ್ಚಾಗಿ ಕಾಡುತ್ತಿದ್ದ ಇದು ಮಕ್ಕಳಲ್ಲಿಯೂ ಹೊಕ್ಕುತ್ತಿದೆ. ಹೀಗಾಗಿ ಆತಂಕ ಎಲ್ಲೆಡೆ ಮನೆ ಮಾಡಿದೆ. ಕಳೆದ ಎರಡು ತಿಂಗಳಲ್ಲಿನ 40 ಸಾವಿರಕ್ಕೂ ಹೆಚ್ಚು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ.
ಮಾರ್ಚ್ 18 ರಿಂದ ಮೇ. 18ರ ವರೆಗೆ ಎರಡು ತಿಂಗಳಿನಲ್ಲಿ 0-9 ವಯೋಮಾನದ ಶೇ. 143ರಷ್ಟು ಮಕ್ಕಳಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದೆ.

10-19 ವಯೋಮಾನದ ಮಕ್ಕಳಲ್ಲಿ ಶೇ.160ರಷ್ಟು ಮಕ್ಕಳಲ್ಲಿ ಸೋಂಕು ಕಂಡು ಬಂದಿದೆ. ಕೊರೊನಾ ವಾರ್ ರೂಂನ ಅಂಕಿ – ಅಂಶಿಗಳಂತೆ 0-9 ವರ್ಷದ 39,846 ಮಕ್ಕಳಿಗೆ ಸೋಂಕು ತಗುಲಿದೆ. 10-19 ವರ್ಷದ 1,05,044 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಹಿಡಿದು ಮಾ. 18ರ ವರೆಗೆ 0-9 ವರ್ಷದ 27,841 ಹಾಗೂ 10-19 ವರ್ಷದ 65,551 ಮಕ್ಕಳಿಗೆ ಕೊರೊನಾವೈರಸ್ ಸೋಂಕು ತಗುಲಿತ್ತು ಎಂದು ವೈದ್ಯಕೀಯ ತಪಾಸಣೆಯಿಂದ ತಿಳಿದಿತ್ತು.

ಒಂದನೇ ಅಲೆಯಲ್ಲಿ ರಾಜ್ಯದಲ್ಲಿ 46 ಮಕ್ಕಳು ಮಹಾಮಾರಿಗೆ ಬಲಿಯಾಗಿದ್ದರು. ಸದ್ಯ ಈ ಸಂಖ್ಯೆ 62ಕ್ಕೆ ಏರಿಕೆ ಕಂಡಿದೆ. 2ನೇ ಅಲೆಯಲ್ಲಿ ಮಕ್ಕಳ ಸಾವಿನ ಸಂಖ್ಯೆ ಕೂಡ ಮೂರು ಪಟ್ಟು ಹೆಚ್ಚಳವಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೇ, ಮೂರನೇ ಅಲೆಯಲ್ಲಿ ಸೋಂಕು ಹೆಚ್ಚಾಗಿ ಮಕ್ಕಳನ್ನೇ ಬಾಧಿಸುತ್ತಿದೆ ಎಂದು ತಜ್ಞರು ಹೇಳಿದ್ದು, ಆತಂಕ ಇನ್ನಷ್ಟು ಹೆಚ್ಚಾಗುತ್ತಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img