ಭಾರತ, ಪಾಕ್ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ಬಾರಿಯ IPL ಟೂರ್ನಿಯ ಮುಂದೂಡಿಕೆ ಮಾಡಲಾಗಿದೆ. ಉಳಿದ ಐಪಿಎಲ್ ಪಂದ್ಯಗಳನ್ನ ರದ್ದು ಮಾಡುವ ನಿರ್ಧಾರವನ್ನು BCCI ಕೈಗೊಂಡಿದೆ. ನಿನ್ನೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಅರ್ಧದಲ್ಲೇ ಮೊಟಕುಗೊಳಿಸಲಾಗಿತ್ತು. ಇದೀಗ ಮೇ25ರವರೆಗೆ ನಡೆಯಬೇಕಿದ್ದ IPL ಟೂರ್ನಿಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ.
ಇನ್ನೂ ಈ ವಿಚಾರವಾಗಿ ವಿರಾಟ್ ಕೊಹ್ಲಿ ಭಾರತೀಯ ಸೇನೆಗೆ ಜೈ ಹಿಂದ್ ಎಂದಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅವರು, ಈ ಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಗ್ರರಿಂದ ರಕ್ಷಿಸಿದ್ದಕ್ಕಾಗಿ ನಾವು ನಮ್ಮ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಮತ್ತು ಅವರಿಗೆ ನಮಸ್ಕರಿಸುತ್ತೇವೆ.
ನಮ್ಮ ವೀರರ ಅಚಲ ಧೈರ್ಯ ಮತ್ತು ಅವರು ಮತ್ತು ಅವರ ಕುಟುಂಬಗಳು ನಮ್ಮ ಮಹಾನ್ ರಾಷ್ಟ್ರಕ್ಕಾಗಿ ಮಾಡುವ ತ್ಯಾಗಗಳಿಗೆ ನಾವು ಸದಾ ಕೃತಜ್ಞರಾಗಿರುತ್ತೇವೆ ಜೈ ಹಿಂದ್ ಬರೆದುಕೊಂಡಿದ್ದಾರೆ. ಇಂದು ಲಕ್ನೋದಲ್ಲಿ ಆರ್ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ ನಡೆಯಬೇಕಿತ್ತು.
ಆದರೆ ಭಾರತ-ಪಾಕ್ ಸಂಘರ್ಷದ ಮಧ್ಯೆ IPL ಟೂರ್ನಿಯನ್ನು ಬಿಸಿಸಿಐ ಅಮಾನತುಗೊಳಿಸಿದೆ. ಉಳಿದ ಐಪಿಎಲ್ ಪಂದ್ಯಗಳ ದಿನಾಂಕವನ್ನು ಸದ್ಯದಲ್ಲೇ ಘೋಷಣೆ ಮಾಡುವ ಸಾಧ್ಯತೆ ಇದೆ. ಆದರೆ ಸದ್ಯಕ್ಕೆ ದೇಶದ ಭದ್ರತೆ ಹಾಗೂ ಸೇನೆಗೆ ಗೌರವ ನೀಡುವ ಅನಿವಾರ್ಯ ಪರಿಸ್ಥಿತಿಯಲ್ಲಿ ಐಪಿಎಲ್ ಹಾಗೂ ಆರ್ಸಿಬಿ ಅಭಿಮಾನಿಗಳಿಗೆ ನಿರಾಸೆ ಕಾದಿದೆ.