ಗ್ರಾಮೀಣ ವಿ.ವಿ ಗೋಶಾಲೆ ಕಾಮಗಾರಿ ಪರಿಶೀಲನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಿವಿಧ ಯೋಜನೆಗಳ ಅನುದಾನದಲ್ಲಿ ತಾಲೂಕಿನ ನಾಗಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿದ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಶುಕ್ರವಾರ ಪರಿಶೀಲಿಸಿದರು.

Advertisement

ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ತಾಲೂಕಿನ ನಾಗಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಿಸಲಾದ ಗೋಶಾಲೆ ಕಾಮಗಾರಿ ವೀಕ್ಷಿಸಿದರು. ದಿ. ವಿ.ಎಸ್. ಚಿಂಚಲಿ ಉನ್ನತೀಕರಿಸಿದ ಸರಕಾರಿ ಪ್ರೌಢಶಾಲೆಯ ಆಟದ ಮೈದಾನ ಮತ್ತು ಅಡುಗೆ ಕೋಣೆ ಕಾಮಗಾರಿ ವೀಕ್ಷಿಸಿ, ಕಡತಗಳನ್ನು ಪರಿಶೀಲಿಸಿದರು. ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳು ಇರುವ ಬಗ್ಗೆ ವಿಚಾರಿಸಿ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಡಿಡಿಪಿಐ ಆರ್.ಎಸ್. ಬುರಡಿ, ಗದಗ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ (ಉಖಾ) ಕುಮಾರ ಪೂಜಾರ, ಗದಗ ಗ್ರಾಮೀಣ ಬಿಇಒ ವಿ.ವಿ. ನಡುವಿನಮನಿ, ಡಿವೈಪಿಸಿ ಎಂ.ಎಚ್. ಕಂಬಳಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ ಏಕಬೋಟೆ, ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಪ್ಪ ಗೂಲಪ್ಪನವರ, ಗ್ರಾ.ಪಂ ಎಸ್‌ಡಿಎ ಗಣೇಶ ಪೂಜಾರ, ಐಇಸಿ ಸಂಯೋಜಕ ವೀರೇಶ ಬಸನಗೌಡ್ರ, ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ, ತಾಂತ್ರಿಕ ಸಹಾಯಕ ಅಜಯ ಅಬ್ಬಿಗೇರಿ, ಬಿಎಫ್‌ಟಿ ದುರ್ಗಪ್ಪ ಆಲೂರ, ಪಂಚಾಯಿತಿ ಸಿಬ್ಬಂದಿ ಹಾಗೂ ಇತರರಿದ್ದರು.


Spread the love

LEAVE A REPLY

Please enter your comment!
Please enter your name here