ಪೊಲೀಸರ ಥಳಿತಕ್ಕೆ ಬಾಲಕ ಬಲಿ!

0
Spread the love

ವಿಜಯಸಾಕ್ಷಿ ಸುದ್ದಿ, ಲಖನೌ

Advertisement

ಕೊರೊನಾ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಪೊಲೀಸರು ಬಾಲಕನನ್ನು ಥಳಿಸಿದ ನಂತರ ಆತ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಭಟ್ಪುರಿ ಜಿಲ್ಲೆಯಲ್ಲಿ ನಡೆದಿದೆ.
ಬಾಲಕನ ಕುಟುಂಬ ಸದಸ್ಯರು ಪೊಲೀಸರ ಥಳಿತದಿಂದಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸದ್ಯ ಓರ್ವ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದ್ದು, ಹೋಮ್ ಗಾರ್ಡ್ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ.

ಬಾಲಕ ಮನೆಯ ಹೊರಭಾಗದಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದಾಗ ಆತನನ್ನು ಪೊಲೀಸರು ಥಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರು ಈ ಕುರಿತು ಹೇಳಿಕೆಯನ್ನು ಪಡೆದಿದ್ದು, ಆರೋಪ ಎದುರಿಸುತ್ತಿರುವ ಸಿಬ್ಬಂದಿಗಳ ವಿರುದ್ಧ ಎಫ್ ಐಆರ್ ನ್ನು ದಾಖಲಿಸಲಾಗುತ್ತದೆ ಹಾಗೂ ತನಿಖೆ ನಡೆಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ನೀಡಿದ್ದಾರೆ.

ಕೊರೋನಾ ಕರ್ಫ್ಯೂ ಉಲ್ಲಂಘನೆ ಮಾಡಿದ್ದಾನೆಂದು ಪೊಲೀಸ್ ಸಿಬ್ಬಂದಿಗಳು 17 ವರ್ಷದ ಬಾಲಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ದೊಣ್ಣೆಯಿಂದ ಹೊಡೆದಿದ್ದಾರೆ ಎಂದು ಕುಟುಬಸ್ಥರು ಕುಟುಂಬ ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ.
ಥಳಿತದಿಂದ ತೀವ್ರವಾಗಿ ಅಸ್ವಸ್ಥಗೊಂಡ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲಿಯೇ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯಕೀಯ ಸಿಬ್ಬಂದಿ ಹೇಳಿದ್ದರು ಎಂದು ಕುಟುಂಬಸ್ಥರು ಹೇಲಿದ್ದಾರೆ.

ಆಕ್ರೋಶಗೊಂಡ ಸ್ಥಳೀಯರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದು ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಬಾಲಕನ ಕುಟುಂಬ ಸದಸ್ಯರಿಗೆ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here