HomeCrime Newsಮಕ್ಕಳಿಗೆ ಸೋಂಕು ಹರಡುವ ಭೀತಿ; ಆತ್ಮಹತ್ಯೆ ಮಾಡಿಕೊಂಡ ತಂದೆ -ತಾಯಿ!

ಮಕ್ಕಳಿಗೆ ಸೋಂಕು ಹರಡುವ ಭೀತಿ; ಆತ್ಮಹತ್ಯೆ ಮಾಡಿಕೊಂಡ ತಂದೆ -ತಾಯಿ!

Spread the love

ವಿಜಯಸಾಕ್ಷಿ ಸುದ್ದಿ, ವಿಜಯವಾಡ

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ದಂಪತಿ, ತಮ್ಮ ಮಕ್ಕಳಿಗೆ ಸೋಂಕು ತಗಲಬಹುದು ಎಂಬ ಭಯದಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಪೆಡಾನಾದಲ್ಲಿ ನಡೆದಿದೆ.

ಪೆಡಾನಾ ಪೊಲೀಸರು ಹೇಳುವಂತೆ, ಜಕ್ಕುಲಾ ಲೀಲಾ ಪ್ರಸಾದ್ (40) ಮತ್ತು ಭಾರತಿ (37) ದಂಪತಿ ಕಳೆದ 10 ದಿನಗಳಿಂದ ಕೊರೊನಾ ಲಕ್ಷಣದಿಂದ ಬಳಲುತ್ತಿದ್ದರು. ಅವರಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದರು.

ಈ ದಂಪತಿಗೆ ಒಂಭತ್ತು ಹಾಗೂ ಐದು ವರ್ಷ ವರ್ಷದ ಹೆಣ್ಣುಮಕ್ಕಳಿದ್ದು, ಅವರಿಗೆ ಸೋಂಕು ಹರಡಬಹುದೆಂಬ ಭಯದಿಂದ, ದಂಪತಿಗಳು ಖಿನ್ನತೆಗೆ ಜಾರಿದ್ದರು. ಕಾರಣ, ಕುಟುಂಬದ ಯಾವುದೇ ಸದಸ್ಯರು ಅವರ ರಕ್ಷಣೆಗೆ ಬಂದಿರಲಿಲ್ಲ. ಹೀಗಾಗಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತು ಸಿಆರ್ ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!