ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿಗಳಿಂದ ತಂತ್ರಜ್ಞಾನ ಬಳಕೆ ಕುರಿತು ಗುಂಪು ಚರ್ಚಾ ಕೂಟವನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಬಳಕೆಯಿಂದಾಗುವ ಅನುಕೂಲ-ಅನಾನೂಕೂಲಗಳ ಬಗ್ಗೆ ವಿಮರ್ಶತ್ಮಾಕವಾಗಿ ಚರ್ಚಿಸಲು ಮುಕ್ತ ಅವಕಾಶ ನೀಡಲಾಗಿತ್ತು.
ಮುಖ್ಯ ಅಥಿತಿಗಳಾಗಿ ಪಾಲ್ಗೊಂಡಿದ್ದ ಪ್ರೊ. ಚೈತ್ರಾ ಚೌಗಲೆ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಹಾಗೂ ಬದ್ಧತೆಯಿಂದ ತಂತ್ರಜ್ಞಾನ ಬಳಕೆ ಮಾಡಿದಲ್ಲಿ ಸಾಧನೆಯತ್ತ ಸಾಗಬಹುದು. ಆದ್ದರಿಂದ ತಾವೆಲ್ಲ ಇತಿಮಿತಿಯಿಂದ ತಂತ್ರಜ್ಞಾನ ಬಳಕೆ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ಬಿಸಿಎ ಸಂಯೋಜಕರಾದ ಪ್ರೊ. ಸವಿತಾ ಪೂಜಾರ ವಿದ್ಯಾರ್ಥಿಗಳ ಗುಂಪುಗಳನ್ನು ರಚಿಸುವುದರ ಮೂಲಕ ವಿವಿಧ ವಿಷಯಗಳ ಮೇಲೆ ಆಶುಭಾಷಣ ಸ್ಪರ್ಧೆ ಏರ್ಪಡಿಸಿ ಪ್ರೋತ್ಸಾಹಿಸಿದರು.
ಪ್ರಾಚಾರ್ಯ ಬಿ.ಎಸ್. ಹಿರೇಮಠ ಮಾತನಾಡಿದರು. ಅಧ್ಯಕ್ಷತೆಯನ್ನ ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ ವಹಿಸಿದ್ದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಕಿಶೋರ ಮುದಗಲ್ಲ ಕಾರ್ಯದರ್ಶಿಗಳಾದ ಮಂಜುನಾಥ ಕುಡತರಕರ, ಸಂಜಯ ಕುಡತರಕರ, ಚೇತನ ಕುಡತರಕರ, ಸಂಯೋಜಕರಾದ ಪ್ರೊ. ಸವಿತಾ ಪೂಜಾರ, ಪ್ರೊ. ಚೈತ್ರಾ ಡಿ, ಪ್ರೊ. ಅಲ್ವಿನಾ ಡಿ, ಪ್ರೊ. ಶಾಹಿದಾ ಶಿರಹಟ್ಟಿ ಮುಂತಾದವರಿದ್ದರು.