ವಿಜಯಸಾಕ್ಷಿ ಸುದ್ದಿ, ಬಳ್ಳಾರಿ
ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಲ್ಲಿ 180ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೋಂಕು ದೃಢಪಟ್ಟಿದ್ದು, 7 ಜನ ಸಾವನ್ನಪ್ಪಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಜನ ಆತಂಕದಲ್ಲಿ ಬದುಕು ಸಾಗಿಸುತ್ತಿದ್ದಾರೆ. ಅಲ್ಲದೇ, ನಾಲ್ಕು ಸೋಂಕಿತ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಮಗು ಬದುಕಿಸಲು ಸಾಧ್ಯವಾಗಲಿಲ್ಲ. ಅಲ್ಲದೇ, ಇದರ ಜೊತೆಗೆ ಕಳೆದ ಹತ್ತು ದಿನಗಳಲ್ಲಿಯೇ 7 ಜನ ಸೋಂಕಿತ ಗರ್ಭಿಣಿಯರ ಗರ್ಭದಲ್ಲಿಯೇ ಕಂದಮ್ಮಗಳು ಸಾವನ್ನಪ್ಪಿವೆ. ಹೀಗಾಗಿ ಜಿಲ್ಲೆಯ ಗರ್ಭಿಣಿಯರಲ್ಲಿ ಭಯ ಕಾಡುತ್ತಿದೆ.
ಸದ್ಯ 180 ಜನ ಗರ್ಭಿಣಿಯರ ಪೈಕಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ 134 ಜನ ಗರ್ಭಿಣಿಯರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಹೆರಿಗೆ ಸಮಯದಲ್ಲಿ ಯಾವುದೇ ತೊಂದರೆ ಆಗಬಾರದು ಎಂಬ ಉದ್ಧೇಶದಿಂದ ಕೋವಿಡ್ ಟೆಸ್ಟ್ ಮಾಡಿಸಿದಾಗ ಸೋಂಕು ಪತ್ತೆಯಾಗಿದೆ. ಹೀಗಾಗಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.
ಗರ್ಭಿಣಿಯರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿ ಮಾಡುವುದರಿಂದ ಮುಂದೆ ಆಗುವ ಅನಾಹುತ ತಪ್ಪಿಸಿಬಹುದಾಗಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.