ನೆಲಮಂಗಲ:- ಮನೆ ಮುಂದೆ ಕಟ್ಟಿದ್ದ ಹಸುಗಳನ್ನು ಕಿಡಿಗೇಡಿಗಳು ಕಳ್ಳತನ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತನಗಳ್ಳಿ ಗ್ರಾಮದಲ್ಲಿ ಜರುಗಿದೆ.
Advertisement
ಗ್ರಾಮದ ಕೃಷ್ಣಪ್ಪ ಎಂಬುವರಿಗೆ ಸೇರಿದ 12 ಹಸುಗಳಲ್ಲಿ ಮೂರು ಹಸುಗಳನ್ನು ಕದಿಯಲಾಗಿದೆ. ಈ ಮೂರು ಹಸುಗಳಲ್ಲಿ, ಒಂದು ಹಸು ಇನ್ನೆರಡು ತಿಂಗಳಲ್ಲಿ ಕರು ಹಾಕುತ್ತಿತ್ತು. ಇನ್ನೆರಡು ಹಸುಗಳಿಂದ ಮನೆ ನಡೆಸುವಷ್ಟು ಆದಾಯ ಬರುತ್ತಿತ್ತು. ಇಂತಹ ಹಸುಗಳನ್ನು ಖತರ್ನಾಕ್ ಕಳ್ಳರು ಕದ್ದಿದ್ದಾರೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯಿಂದ ರೈತ ಕಂಗಾಲಾಗಿ ಕಣ್ಣೀರು ಹಾಕಿದ್ದಾನೆ.