ಆಂಧ್ರಪ್ರದೇಶ:- ಆಂಧ್ರದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಕಾರೊಂದು ಬಾವಿಗೆ ಉರುಳಿಬಿದ್ದ ಪರಿಣಾಮ ಕರ್ನಾಟಕದ ಮೂವರು ಸಾವನ್ನಪ್ಪಿರುವ ಘಟನೆ ಜರುಗಿದೆ. ಲೊಕೇಶ, ಶಿವಾನಂದ, ಚಲಪತಿ ಮೃತರು. ಇನ್ನು ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಡುಗೆ ಕೆಲಸಕ್ಕಾಗಿ ಕಾರಿನಲ್ಲಿ ಒಟ್ಟು ಐವರು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಚಿಂತಾಮಣಿ ಮೂಲದ ಐವರು ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರು ಬಚಾವ್ ಆಗಿದ್ದಾರೆ.
ಬಾವಿ ಆಳವಾಗಿದ್ದರಿಂದ ಕಾರಿನೊಳಗೆ ಮೂವರು ಮೃತಪಟ್ಟಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸ್ಥಳೀಯರು, ಪೊಲೀಸರು ಸೇರಿ ಬಾವಿಯಲ್ಲಿ ಬಿದ್ದಿದ್ದ ಕಾರನ್ನು ಮೇಲಕ್ಕೆತ್ತಿದರು. ಮೊದಲಿಗೆ ಸ್ಥಳೀಯರು ಅಗ್ಗಗಳನ್ನು ಹಾಕಿ ಕಾರನ್ನು ಮೇಲೆತ್ತಲು ಪ್ರಯತ್ನಿಸಿದರು. ಆದ್ರೆ ಅದು ಸಾಧ್ಯವಾಗಿಲ್ಲ. ಬಳಿಕ ಕ್ರೇನ್ ಮೂಲಕ ಬಾವಿಯೊಳಗಿದ್ದ ಕಾರನ್ನು ಹೊರತೆಗೆಲಾಯ್ತು.