HomeGadag Newsಗದಗದ ಎಸ್ಪಿ ಸಹಿತ ಮೂವರು ಪೊಲೀಸರಿಗೆ ಡಿಜಿ - ಐಜಿಪಿ ಪ್ರಶಂಸನಾ ಪದಕ!

ಗದಗದ ಎಸ್ಪಿ ಸಹಿತ ಮೂವರು ಪೊಲೀಸರಿಗೆ ಡಿಜಿ – ಐಜಿಪಿ ಪ್ರಶಂಸನಾ ಪದಕ!

For Dai;y Updates Join Our whatsapp Group

Spread the love

ಗದಗ:- ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ 2024-25ನೇ ಸಾಲಿನ ‘ಡಿಜಿ ಮತ್ತು ಐಜಿಪಿ ಪ್ರಶಂಸನಾ ಪದಕ’ ಪ್ರಶಸ್ತಿಗೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿ ಜಿಲ್ಲೆಯ ಮೂವರು ಪೊಲೀಸರು ಭಾಜನರಾಗಿದ್ದಾರೆ.

ಎಸ್, ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪೊಲೀಸ್‌ ಇಲಾಖೆಯ ಸಾಧಕರಿಗೆ ಬೆನ್ನು ತಟ್ಟುವ ಕಾರ್ಯ ನಡೀತಿದೆ. ಮೊದಲ ಬಾರಿಗೆ “ಡಿಜಿ & ಐಜಿಪಿ ಪ್ರಶಂಸನಾ ಡಿಸ್ಕ್ 2024-25″ ರ ಅಡಿ ಪುರಸ್ಕಾರಕ್ಕೆ ರಾಜ್ಯದ 200 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅದ್ರಲ್ಲಿ ಗದಗದ ಎಸ್ಪಿ ಸೇರಿ ಮೂವರು ಪೊಲೀಸರಿಗೆ ಈ ಪುರಸ್ಕಾರ ಘೋಷಣೆಯಾಗಿದೆ.

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಮುಳಗುಂದ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಸಂಗಮೇಶ ಶಿವಯೋಗಿ, ಮತ್ತು ಮುಂಡರಗಿ ಠಾಣೆಯ ಕಾನ್ಸಟೇಬಲ್ ಜಾಫರ್ ಬಚ್ಚೇರಿ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಶಸ್ತಿಗೆ ಭಾಜನರಾದವರ ವಿವರ:-

ಮೊದಲಿಗೆ ಗದಗದ ಎಸ್ಪಿ ಬಿ.ಎಸ್. ನೇಮಗೌಡ:-

ಜಿಲ್ಲಾ ಎಸ್‌ಪಿ ಬಿ.ಎಸ್. ನೇಮಗೌಡ ಅವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಪೊಲೀಸರ ಮನೋಬಲ ಹೆಚ್ಚಿಸುವಲ್ಲಿ ಹಾಗೂ ಕಟ್ಟುನಿಟ್ಟಿನ ಸಾರಿಗೆ ನಿಯಮ ಪಾಲನೆ, ಥರ್ಡ ಐ ನಂಥ ವಿಶಿಷ್ಠ ಯೋಜನೆ ಮತ್ತು ಟ್ರಾಫಿಕ್ ಸಿಗ್ನಲ್ ಗಳಲ್ಲಿ ಸಾರ್ವಜನಿಕರಿಗೆ ಅನೂಕೂಲಕರ ವಾತಾವರಣ ಸೇರಿದಂತೆ ಹೀಗೆ ಸಾರ್ವಜನಿಕರ ನಂಬಿಕೆ ಗಳಿಸುವಲ್ಲಿ ನಿರಂತರ ಪ್ರಯತ್ನಗಳನ್ನು ತೆಗೆದುಕೊಂಡಿದ್ದಾರೆ. ಅಧಿಕಾರದ ನಿಷ್ಠೆ ಮತ್ತು ಸಮಾಜದ ಒಳಿತಿಗಾಗಿ ಅವರ ಸೇವೆ ಶ್ಲಾಘನೀಯವಾಗಿರುವದು ಪ್ರಶಸ್ತಿಗೆ ಕಾರಣವಾಗಿದೆ.

* ಇನ್ಸ್ಪೆಕ್ಟರ್ ಸಂಗಮೇಶ ಶಿವಯೋಗಿ:-

ಮುಳಗುಂದ ಠಾಣೆಯ ಇನ್ಸಪೆಕ್ಟರ್ ಸಂಗಮೇಶ ಶಿವಯೋಗಿ ಅವರು ಗ್ರಾಮೀಣ ಪ್ರದೇಶದಲ್ಲಿ ಕಾನೂನು ಹಾಗೂ ಶಾಂತಿ ಕಾಪಾಡುವಲ್ಲಿ ನಿರಂತರ ಶ್ರಮವಹಿಸಿದ್ದಾರೆ. ಗದಗ ನಗರದಲ್ಲೂ ಅವರು ಕರ್ತವ್ಯ ನಿರ್ವಹಿಸಿ ಇಲಾಖೆಗೆ ಸವಾಲಾಗಿದ್ದ ಅಪರಾಧಿಗಳನ್ನ ಪತ್ತೆ ಹಚ್ಚುವಲ್ಲಿ ಮೊದಲ ಸ್ಥಾನದಲ್ಲಿದ್ದು, ಅವರ ತಂತ್ರಜ್ಞಾನದ ಜ್ಞಾನ ಹಾಗೂ ಪರಿಣಾಮಕಾರಿ ನಿರ್ವಹಣೆ ಹಾಗೂ ಸಾರ್ವಜನಿಕರ ಜೊತೆಗಿನ ಜನಸ್ನೇಹಿ ಆಡಳಿತ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

* ಕಾನ್ಸಟೇಬಲ್ ಜಾಫರ್ ಬಚ್ಚೇರಿ:-

ಮುಂಡರಗಿ ಪೊಲೀಸ್ ಠಾಣೆಯ ಕಾನ್ಸಟೇಬಲ್ ಜಾಫರ್ ಬಚ್ಚೇರಿ ಅವರು ತಮ್ಮ ಕರ್ತವ್ಯನಿಷ್ಠೆ, ಜನಸ್ನೇಹಿ ನಡವಳಿಕೆ ಮತ್ತು ಅಪರಾಧ ಪತ್ತೆ ಕಾರ್ಯಗಳಲ್ಲಿ ತೋರಿದ ತೀವ್ರತೆಗಾಗಿ ರಾಜ್ಯ ಮಟ್ಟದ ಮಾನ್ಯತೆಯನ್ನು ಪಡೆದಿದ್ದಾರೆ. ಅವರು ಮುಂಡರಗಿಯ ಜನತೆಯ ನಿಕಟ ಬಂಧುವಾಗಿದ್ದು, ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸ ಹೆಚ್ಚುವಂತೆ ಮಾಡಿದ್ದಾರೆ.

ಮೇ 21ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ:

ಈ ಶ್ರೇಷ್ಠ ಸಾಧಕರಿಗೆ ಮೇ 21ರಂದು ಡಿಜಿಪಿ ಕಮಾಂಡೇಷನ್ ಡಿಸ್ಕ್ ಪರೇಡ್‌ನಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ. ಈ ಸಮಾರಂಭವನ್ನು ಡಿಜಿಪಿ ಅಲೋಕ್ ಮೋಹನ್ ಅವರು ನೇರವಾಗಿ ನಿರ್ವಹಿಸಲಿದ್ದು, ಇದು ಅವರ ನಿವೃತ್ತಿಗೆ ಮುನ್ನದ ಕೊನೆಯ ಅಧಿಕೃತ ಪರೇಡ್ ಆಗಿರುವುದು ವಿಶೇಷ.

ಅಭಿನಂದನೆಗಳ ಮಹಾಪೂರ:

ಈ ತ್ರಿಮೂರ್ತಿಗಳ ಸಾಧನೆಗೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಪೊಲೀಸ್ ಇಲಾಖೆಯ ಇತರ ಸಿಬ್ಬಂದಿ, ಸಾರ್ವಜನಿಕರು ಹಾಗೂ ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ನೇರವಾಗಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. “ಇವರು ಸಕಾಲದಲ್ಲಿ ಮಾಡಿದ ಸತ್ಯ ಸೇವೆಗೆ ದೊರೆತ ಪ್ರಾಮಾಣಿಕ ಗೌರವ ಇದಾಗಿದೆ. ಇಂತಹ ಸೇವೆಗಳಿಗೆ ಪದಕ ರೂಪದಲ್ಲಿ ಸ್ಮರಣೆ ಸಿಗುವುದು ಮುಂದೆ ಕೆಲಸ ಮಾಡುವವರಿಗೆ ಪ್ರೇರಣೆ,” ಎಂದು ಹಿರಿಯರು ಅಭಿಪ್ರಾಯಪಟ್ಟಿದ್ದಾರೆ.

ಗದಗ ಜಿಲ್ಲೆಯ ಮೂವರು ಶ್ರೇಷ್ಠರು ಪಡೆದ ಡಿಜಿಪಿ ಪ್ರಶಂಸಾ ಪದಕ ರಾಜ್ಯಕ್ಕೆ ಮಾತ್ರವಲ್ಲ, ಜಿಲ್ಲೆಯ ಪೊಲೀಸರು, ಸಾರ್ವಜನಿಕರಿಗೂ ಹೆಮ್ಮೆಯ ವಿಷಯವಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!