ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿಯನ್ನು ಖಂಡಿಸುತ್ತೇವೆ: ಡಿಕೆ ಶಿವಕುಮಾರ್

0
Spread the love

ಬೆಂಗಳೂರು: ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿಯನ್ನು ಖಂಡಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪರಮೇಶ್ವರ್‌ ಆರೋಗ್ಯವಾಗಿದ್ದು, ಕ್ಯಾಬಿನೆಟ್‌ಗೆ ಬರುತ್ತಾರೆ. ಅವರ ಮೇಲೆ ಸಾಕಷ್ಟು ಜವಾಬ್ದಾರಿ ಇದೆ. ಅವರು ಗೌರವಾನ್ವಿತ ವ್ಯಕ್ತಿ, ನಾನು ಅವರ ಜೊತೆ ಇರುತ್ತೇನೆ. ಇನ್ನೂ, ರನ್ಯಾ ತಪ್ಪು ಮಾಡಿದ್ರೆ ಕ್ರಮ ಆಗಲಿ ಎಂದಿದ್ದಾರೆ.

Advertisement

ಇನ್ನೂ  ಸೋನಿಯಾ ಗಾಂಧಿ ಕೇಸ್​​ನಿಂದ ಹಿಡಿದು ಎಲ್ಲ ವಿಚಾರವಾಗಿ ನಿತ್ಯ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ. ಚಾರಿಟೇಬಲ್​ ಟ್ರಸ್ಟ್​​ಗಳು ಸಾಕಷ್ಟು ನೆರವು ನೀಡುವ ಕೆಲಸ ಮಾಡುತ್ತಿವೆ. ಶಾಲಾ, ಕಾಲೇಜು ಫೀಸ್​​,

ಮದುವೆ ಕಾರ್ಯಗಳಿಗೆ ನೆರವು ನೀಡಲಾಗುತ್ತದೆ. ಈ ರೀತಿಯ ಸಣ್ಣಪುಟ್ಟ ಚಾರಿಟಿ ನಡೆದಿರಬಹುದು, ಅದು ಇಲ್ಲ ಅಂತ ಹೇಳಲ್ಲ. ಮದುವೆ, ಆಸ್ಪತ್ರೆ ಬಿಲ್​​ನಂತಹ ಸಂದರ್ಭದಲ್ಲಿ ನೆರವಾಗಿರಬಹುದು. ಉಳಿದ ವಿಚಾರದ ಬಗ್ಗೆ ಏನು ಮಾಡುತ್ತಾರೋ ನೋಡೋಣ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here