ಮೈಸೂರು: ಬಿಜೆಪಿ ನಾಯಕರಿಗೆ ನಾಚಿಕೆ ಅನ್ನೋದಿಲ್ಲ, ಕಾಮನ್ ಸೆನ್ಸ್ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರಾದ ಆರ್ ಅಶೋಕ, ವಿಜಯೇಂದ್ರ, ಸಿಟಿ ರವಿ, ಎನ್ ರವಿಕುಮಾರ್ ಮೊದಲಾದವರೆಲ್ಲ ಪದೇಪದೆ ಕಲಬುರಗಿಗೆ ಭೇಟಿ ನೀಡುತ್ತಿರುವುದು ಬಹಳ ಸಂತಸವನ್ನುಂಟು ಮಾಡಿದೆ,
Advertisement
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಇದೇ ನಾಯಕರು ಒಮ್ಮೆಯೂ ಕಲಬುರಗಿಗೆ ಭೇಟಿ ನೀಡಿರಲಿಲ್ಲ ಎಂದು ಹೇಳಿದರು. ಆದರೆ ಇವರು ಬಿಜೆಪಿ ಸ್ಥಳೀಯ ನಾಯಕರ ಮಾತನ್ನು ನಂಬಿಕೊಂಡು ಬರುತ್ತಿದ್ದಾರೆ, ಇವರಿಗೆ ನಾಚಿಕೆ ಅನ್ನೋದಿಲ್ಲ, ಕಾಮನ್ ಸೆನ್ಸ್ ಇಲ್ಲ ಎಂದು ಖರ್ಗೆ ಹೇಳಿದರು.