ಬಳ್ಳಾರಿ:– ಹೃದಯಾಘಾತದಿಂದ ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಮುಖ್ಯ ಪೇದೆಯೊಬ್ಬರು ಶನಿವಾರ ಸಾವನ್ನಪ್ಪಿದ್ದಾರೆ. ಆರ್.ದಾದಾಸಾಹೇಬ್(51) ಮೃತ ಪೊಲೀಸ್ ಮುಖ್ಯ ಪೇದೆ.
Advertisement
ದಾದಾಸಾಹೇಬ್ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮೃತ ಪೊಲೀಸ್ ಪೇದೆ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ದಾದಾಸಾಹೇಬ್ ಅವರ ಸಾವಿಗೆ ಪೊಲೀಸ್ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.