ವಿಜಯೇಂದ್ರ, ಆರ್ ಅಶೋಕ್ ಅಸಮರ್ಥ ನಾಯಕರು ಅಂತ ಮತ್ತೊಮ್ಮೆ ಸಾಬೀತು: ಡಿಕೆ ಸುರೇಶ್

0
Spread the love

ಬೆಂಗಳೂರು: ವಿಜಯೇಂದ್ರ, ಆರ್ ಅಶೋಕ್ ಅಸಮರ್ಥ ನಾಯಕರು ಅಂತ ಮತ್ತೊಮ್ಮೆ ಸಾಬೀತಾಗಿದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.  ಬೆಂಗಳೂರಿನಲ್ಲಿ ಮಾತನಾಡಿದ ಅವರು,

Advertisement

ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಅರ್ ದಾಖಲಾಗಿ ಅವರು ಎಂಥ ರತ್ನ ಎಂದು ಇಡೀ ರಾಜ್ಯಕ್ಕೆ ಗೊತ್ತಾದರೂ ಅಶೋಕ ಮತ್ತು ವಿಜಯೇಂದ್ರ ಯಾವುದೇ ಕ್ರಮ ಜರುಗಿಸಿಲ್ಲ, ಮುನಿರತ್ನ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದಾಗ್ಯೂ ಇವರಿಬ್ಬರು ಸುಮ್ಮನಿದ್ದಾರೆಂದರೆ ಎಷ್ಟು ಅಸಮರ್ಥ ನಾಯಕರು ಅನ್ನೋದು ಗೊತ್ತಾಗುತ್ತದೆ ಎಂದು ಹೇಳಿದರು.

ಅತ್ಯಾಚಾರ, ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಸಾಬೀತಾಗಿ, ಎಫ್ಎಸ್ಎಲ್ ರಿಪೋರ್ಟ್ ಅದನ್ನು ದೃಢೀಕರಿಸಿ ಚಾರ್ಜ್ಶೀಟ್ ಸಲ್ಲಿಕೆಯಾಗಿದ್ದರೂ ಮುನಿರತ್ನ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸುರೇಶ್ ಹೇಳಿದರು.


Spread the love

LEAVE A REPLY

Please enter your comment!
Please enter your name here