ಈ ಹಿಂದೆ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಪಾರು’ ಸೀರಿಯಲ್ ಖ್ಯಾತಿಯ ನಟ ಶ್ರೀಧರ್ ನಾಯಕ್ ವಿಧಿವಶರಾಗಿದ್ದಾರೆ.
ಇತ್ತೀಚೆಗೆ ಶ್ರೀಧರ್ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರಿಗೆ ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು. ಅವರು ಗುರುತೇ ಸಿಗದಷ್ಟು ಬದಲಾಗಿ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು. ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಶ್ರೀಧರ್ ಅವರಿಗೆ ಅನಾರೋಗ್ಯ ಉಂಟಾದ ವಿಚಾರದ ಬಗ್ಗೆ ಏಪ್ರಿಲ್ನಲ್ಲಿ ಸುದ್ದಿ ಬಿತ್ತರವಾಗಿತ್ತು. ವಿಚಿತ್ರ ಸೋಂಕಿನಿಂದ ಅವರು ಈ ರೀತಿ ಆಗಿದ್ದರು. ಗುರುತು ಸಿಗದಷ್ಟು ಬದಲಾಗಿ ಅವರು ಆಸ್ಪತ್ರೆಯ ಬೆಡ್ ಮೇಲೆ ಮಲಗಿರೋದು ಕಂಡು ಅಭಿಮಾನಿಗಳಿಗೆ ನಿಜಕ್ಕೂ ಶಾಕ್ ಆಗಿತ್ತು. ಅವರು ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿದ್ದರು. ಶ್ರೀಧರ್ ಅವರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಅನೇಕರು ಹಣದ ಸಹಾಯ ಕೂಡ ಮಾಡಿದ್ದರು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ವಿಧಿವಶರಾಗಿದ್ದಾರೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.