HomeGadag Newsಪೌರ ನೌಕರರ ಸಂಘದ ಮುಷ್ಕರ 2ನೇ ದಿನಕ್ಕೆ: ಹೋರಾಟಕ್ಕೆ ಹಲವು ಮುಖಂಡರ ಬೆಂಬಲ

ಪೌರ ನೌಕರರ ಸಂಘದ ಮುಷ್ಕರ 2ನೇ ದಿನಕ್ಕೆ: ಹೋರಾಟಕ್ಕೆ ಹಲವು ಮುಖಂಡರ ಬೆಂಬಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಪುರಸಭೆಯ ಎದುರಿನಲ್ಲಿ ಮಂಗಳವಾರದಿಂದ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ಪುರಸಭೆಯ ಎಲ್ಲ ನೌಕರರು ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರವು ಬುಧವಾರ 2ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟಕ್ಕೆ ಅನೇಕ ಮುಖಂಡರು, ಮಾಜಿ ಶಾಸಕರು ಹಾಗೂ ಸಂಘದ ಜಿಲ್ಲಾ ಪ್ರತಿನಿಧಿಗಳು ಆಗಮಿಸಿ ಬೆಂಬಲ ಸೂಚಿಸಿದ್ದಾರೆ.

ಬುಧವಾರ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷ ರಮೇಶ ಹಲಗಿ, ಗೌರವಾಧ್ಯಕ್ಷ ಕೆಂಚಪ್ಪ ಪೂಜಾರಿ, ಗದಗ ತಾಲೂಕು ಅಧ್ಯಕ್ಷ ಹೇಮೇಶ ಶೆಟ್ಟಿ, ವಿರೂಪಾಕ್ಷಪ್ಪ ರಾಮಗೇರಿ, ನಾಗರಾಜ ಬಳ್ಳಾರಿ ಭೇಟಿ ನೀಡಿ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಮೇಶ ಹಲಗಿ ಮಾತನಾಡಿ, ಸಂಘದ ವಿವಿಧ ಬೇಡಿಕೆಗಳನ್ನು ಈಡೇರಿಸವಂತೆ ಸರಕಾರಕ್ಕೆ 45 ದಿನಗಳನ್ನು ಗಡುವು ನೀಡಲಾಗಿತ್ತು. ಅಲ್ಲಿಯವರೆಗೆ ಕಪ್ಪು ಪಟ್ಟಿ ಧರಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೆಲಸ ಮಾಡುತ್ತ ಹೋರಾಟ ಮಾಡಿದ್ದೇವೆ. ಆದರೆ ಸರಕಾರ ನಮ್ಮ ಯಾವುದೇ ಹೋರಾಟಕ್ಕೂ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ಇದೀಗ ಸಭೆ ಮಾಡಿ ಪ್ರತಿಭಟನೆ ಹಿಂತೆಗೆದುಕೊಳ್ಳುವAತೆ ಹೇಳುತ್ತಿದ್ದಾರೆ. ಆದರೆ ಬೇಡಿಕೆ ಈಡೇರಿಕೆ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರ ನೀಡುತ್ತಿಲ್ಲ. ಪೌರ ಕಾರ್ಮಿಕರು, ಡ್ರೈವರ್, ಕ್ಲೀನರ್ಸ್, ಲೋಡರ್ಸ್ ಸೇರಿದಂತೆ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಎಲ್ಲರನ್ನೂ ಸರಕಾರ ಖಾಯಂಗೊಳಿಸಬೇಕು ಹಾಗೂ ಇನ್ನಿತರ ಬೇಡಿಕೆಗಳು ಬಹುದಿನಗಳಿಂದ ಇದ್ದು ಇದರ ಬಗ್ಗೆ ಸರಕಾರ ಸ್ಪಷ್ಟ ಭರವಸೆ ನೀಡದ ಹೊರತು ಪ್ರತಿಭಟನೆ ಕೈಬಿಡುವ ಪ್ರಶ್ನೆಯೇ ಇಲ್ಲ. ಯಾವುದೇ ಒತ್ತಡಕ್ಕೆ, ಬೆದರಿಕೆಗೆ ಮಣಿಯುವದಿಲ್ಲ ಎಂದರು.

ಬುಧವಾರ ಮುಂಜಾನೆ ಮಾಜಿ ಶಾಸಕ ರಾಮಣ್ಣ ಲಮಾಣಿ ಹೋರಾಟದ ಸ್ಥಳಕ್ಕೆ ಆಗಮಿಸಿ ಹೋರಾಟಗಾರರಿಗೆ ಬೆಂಬಲ ಸೂಚಿಸಿ ಮಾತನಾಡಿ, ಮುಷ್ಕರ ನಿರತರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಬೇಗನೇ ಬಗೆಹರಿಸಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದರು.

ಅದರಂತೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯ ಕರಡಿ, ಸದಸ್ಯ ರಾಮಣ್ಣ ಗಡದವರ ಮುಷ್ಕರಕ್ಕೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಎನ್.ಆರ್. ಸಾತಪುತೆ, ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ, ಪುರಸಭೆ ಕಚೇರಿ ವ್ಯವಸ್ಥಾಪಕಿ ಮಂಜುಳಾ ಹೂಗಾರ, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಬಸವಣ್ಣೆಪ್ಪ ನಂದೆಣ್ಣವರ ಇದ್ದರು.

ಸರ್ಕಾರಿ ನಿವೃತ್ತ ನೌಕರರ ಸಂಘದ ಸದಸ್ಯ ಪೂರ್ಣಾಜಿ ಖರಾಟೆ ಮುಷ್ಕರ ನಡೆಸುವವರಿಗೆ ಬೆಂಬಲ ಸೂಚಿಸಿ ಮಾತನಾಡಿ, ಪೌರ ಕಾರ್ಮಿಕರು ಒಂದು ದಿನ ಕೆಲಸ ಮಾಡದಿದ್ದರೆ ಇಡೀ ಊರು ಗಬ್ಬೆದ್ದು ನಾರುತ್ತದೆ. ಅಲ್ಲದೆ ನೀರು ಪೂರೈಕೆದಾರರು ಇದೇ ರೀತಿ ಮುಷ್ಕರ ನಡೆಸಿದರೆ ಜನತೆಗೆ ನೀರಿನ ಸಮಸ್ಯೆ ಉಂಟಾಗಲಿದೆ. ಇಂಥ ಕೆಲಸ ಮಾಡುವವರ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಒತ್ತಾಯಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!