ಪ್ರೀತಿಸಿ ಮದ್ವೆಯಾಗಿದ್ದವಳನ್ನ 10 ಬಾರಿ ಇರಿದು ಕೊಂದು ಪರಾರಿಯಾಗಿದ್ದ ಪತಿ ಅರೆಸ್ಟ್..!

0
Spread the love

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಚಾಕುವಿನಿಂದ ಮನಸ್ಸೋ ಇಚ್ಛೆ ಇರಿದು ಹತ್ಯೆಗೈದು ಪರಾರಿಯಾಗಿದ್ದ ಗಂಡನನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅವಿನಾಶ್(32) ಬಂಧಿತ ಆರೋಪಿಯಾಗಿದ್ದು, ಕೀರ್ತಿಯನ್ನು 4 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಬುಧವಾರ ಬೆಳಗ್ಗೆ ಇವರಿಬ್ಬರ ಮಧ್ಯೆ ಜಗಳ ಏರ್ಪಟ್ಟು, ಪತ್ನಿ ಕೀರ್ತಿಯನ್ನ ಅವಿನಾಶ್ ಚಾಕುವಿನಿಂದ ಹತ್ತಕ್ಕೂ ಹೆಚ್ಚು ಬಾರಿ ಇರಿದಿದ್ದ.

Advertisement

ಪತಿಯಿಂದ ಚಾಕು ಇರಿತಕ್ಕೊಳಗಾದ ಕೀರ್ತಿ ರಕ್ತದ ಮಡುವಿನಲ್ಲೇ ಮನೆಯಿಂದ ಓಡಿ ಬಂದು ನಡು ರಸ್ತೆಯಲ್ಲಿ ಕೂಗಿಕೊಂಡು ಬಿದ್ದಿದ್ದಳು. ಕೂಡಲೇ ಆಕೆಯನ್ನು ಪೋಷಕರು ಹಾಗೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅವಿನಾಶ್, ಮನಸೋ ಇಚ್ಛೆ ಚಾಕುವಿನಿಂದ ಹಲ್ಲೆ ಮಾಡಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು

ಕೀರ್ತಿಗೆ ಚಾಕುವಿನಿಂದ ಇರಿದ ಅವಿನಾಶ್, ಬಳಿಕ ಮುಳ್ಳಯ್ಯನಗಿರಿ ಕಾಡಿನಲ್ಲಿ ನಾಪತ್ತೆಯಾಗಿದ್ದ. ಆತನ ಬಂಧನಕ್ಕಾಗಿ ಚಿಕ್ಕಮಗಳೂರು ಎಸ್ಪಿ ವಿಕ್ರಂ ಆಮ್ಟೆ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಸಚಿನ್ ಹಾಗೂ ಸಬ್ ಇನ್ಸ್ಪೆಕ್ಟರ್, ರಾಜೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿದ್ದರು. ಘಟನೆ ನಡೆದ ಏಳರಿಂದ ಎಂಟು ಗಂಟೆಗಳ ಕಾಲ ಮುಳ್ಳಯ್ಯನಗಿರಿ ಕಾಡಿನಲ್ಲಿ ಅವಿತು ಕೂತಿದ್ದ ಆರೋಪಿ ಅವಿನಾಶ್ನನ್ನ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here