ಬೆಂಗಳೂರು: ಕಾರಿಗೆ ಮಳೆ ನೀರು ಹಾರಿದ್ದಕ್ಕೆ ಚಾಲಕನ ಬೆರಳು ಕಚ್ಚಿ ವಿಕೃತಿ ಮೆರೆದ ಘಟನೆ ಬೆಂಗಳೂರಿನ ಲುಲು ಮಾಲ್ ಅಂಡರ್ ಪಾಸ್ ಬಳಿ ನಡೆದಿದೆ. ಮೆಜೆಸ್ಟಿಕ್ನಿಂದ ಲುಲು ಮಾಲ್ ಕಡೆ ಜಯಂತ್ ದಂಪತಿಗಳು ತೆರಳುತ್ತಿದ್ದರು. ಈ ವೇಳೆ ಓಕುಳಿಪುರಂ ಅಂಡರ್ ಪಾಸ್ನಲ್ಲಿ ನಿಂತಿದ್ದ ನೀರು ಪಕ್ಕದ ಕಾರಿಗೆ ಹಾರಿದೆ.
ಕೂಡಲೇ ಕಾರು ನಿಲ್ಲಿಸಿದ ಚಾಲಕ ಅವಾಚ್ಯ ಪದಗಳಿಂದ ಜಯಂತ್ರನ್ನು ನಿಂದಿಸಿದ್ದಾನೆ. ಈ ಬಗ್ಗೆ ವ್ಯಕ್ತಿ ಕ್ಷಮೆ ಕೇಳಿದ್ದರೂ ಬಿಟ್ಟಿಲ್ಲ. KA02 MT0512 I20 ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿ, ಮೆಜೆಸ್ಟಿಕ್ ಅಂಡರ್ ಪಾಸ್ ಬಳಿಯಿಂದ ಲುಲು ಮಾಲ್ ಅಂಡರ್ ಪಾಸ್ವರೆಗೂ ಜಯಂತ್ ಕಾರು ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿದ್ದಾನೆ.
ಬಳಿಕ ಕಾರ್ ನಲ್ಲಿದ್ದ ಜಯಂತ್ರನ್ನು ಎಳೆದಾಡಿ ಮುಖಕ್ಕೆ ಗುದ್ದಿ ಹಲ್ಲೆ ಮಾಡುವ ಮೂಲಕ ರೌಡಿಸಂ ಮಾಡಿದ್ದಾನೆ. ಅಷ್ಟೇ ಅಲ್ಲದೆ ಬಲಗೈನ ಉಂಗುರದ ಬೆರಳನ್ನ ಕಚ್ಚಿ ಮಾಂಸ ಕಾಣುವಂತೆ ಗಾಯ ಮಾಡಿದ್ದಾನೆ. ಬಲಗೈ ಬೆರಳಿನ ಮಾಂಸ ಹೊರಬಂದಿದ್ದರಿಂದ ಜಯಂತ್ ಸರ್ಜರಿಗೊಳಗಾಗಿದ್ದು,
ವೈದ್ಯರು ಐದು ಸ್ಟಿಚ್ ಹಾಕಿದ್ದಾರೆ. ಜೊತೆಗೆ 6 ತಿಂಗಳು ವಿಶ್ರಾಂತಿ ಮಾಡುವಂತೆ ಸಲಹೆ ನೀಡಿದ್ದಾರೆ. ಆದರೆ ತನ್ನದಲ್ಲದ ತಪ್ಪಿಗೆ ಜಯಂತ್ 2 ಲಕ್ಷ ರೂ ಆಸ್ಪತ್ರೆ ಬಿಲ್ ಕಟ್ಟಿದ್ದಾರೆ. ಸದ್ಯ ಘಟನೆ ಸಂಬಂಧ ಮಾಗಡಿ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರಿನಲ್ಲಿದ್ದ ಚಾಲಕ ಮತ್ತು ಮಹಿಳೆ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.