ಪಂಜಾಬ್ ವಿರುದ್ಧ ಗೆದ್ದು ಫೈನಲ್’ಗೇರಿದ RCB: ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಹೇಳಿದ್ದೇನು..?

0
Spread the love

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ ಫೈನಲ್​ಗೆ ಲಗ್ಗೆಯಿಟ್ಟಿದೆ. ಮುಲ್ಲನ್​ಪುರ್​ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿದೆ.

Advertisement

ಇನ್ನೂ ಸೋತ ಬಳಿಕ ಮಾತನಾಡಿರುವ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್, ನಾವು ಯುದ್ಧವನ್ನು ಕಳೆದುಕೊಂಡಿದ್ದೇವೆ, ಆದರೆ ಅದು ಯುದ್ಧವಲ್ಲ. ಹಾಗಂತ ಈ ದಿನವನ್ನು ಮರೆಯುವಂತಿಲ್ಲ ಎಂದು ಹೇಳಿದ್ದಾರೆ.

ಈ ದಿನ ನಮಗೆ ನೆನಪಿನಲ್ಲಿ ಇರಬೇಕು. ನಾವು ಮತ್ತೆ ನಮ್ಮ ಕಾರ್ಯತಂತ್ರವನ್ನು ರೂಪಿಸಬೇಕು. ಮೊದಲ ಇನ್ನಿಂಗ್ಸ್‌ನಲ್ಲಿ ಬಹಳಷ್ಟು ವಿಕೆಟ್‌ಗಳನ್ನು ಕಳೆದುಕೊಂಡೆವು. ಅದರ ಬಗ್ಗೆ ಯೋಚಿಸಬೇಕಾಗಿರೋದು ತುಂಬಾನೇ ಇದೆ.

ನಿಜ ಹೇಳಬೇಕು ಅಂದರೆ ನನ್ನ ನಿರ್ಧಾರಗಳನ್ನು ನಾನು ಅನುಮಾನಿಸುವುದಿಲ್ಲ. ಮೈದಾನದ ಹೊರಗೆ ಮತ್ತು ಒಳಗೆ ಏನೇ ಪ್ಲಾನ್ ಮಾಡಿದ್ದರೂ ಅದು ಸರಿಯಾಗಿದೆ ಎಂದು ಭಾವಿಸುತ್ತೇನೆ. ಈ ದಿನ ಅದು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ ಅಷ್ಟೇ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here