ಕಾರಿನ ಗ್ಲಾಸ್ ಒಡೆದು ಕಳ್ಳರ ಕೈಚಳಕ: 11.5 ಲಕ್ಷ ರೂ. ನಗದು ದೋಚಿ ಎಸ್ಕೇಪ್!

0
Spread the love

ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಕಾರಿನ ಗ್ಲಾಸ್ ಒಡೆದು 11.5 ಲಕ್ಷ ರೂ. ನಗದು ದೋಚಿ ಕಳ್ಳರು ಪರಾರಿಯಾದ ಘಟನೆ ಜರುಗಿದೆ. ಅತೀಕ್ ರೆಹಮಾನ್ ಎಂಬವರಿಗೆ ಸೇರಿದ ಕಾರಿನಲ್ಲಿ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಅತೀಕ್ ಅವರು ದಾಬಸ್​​ಪೇಟೆಯಲ್ಲಿ ಲಾಜಿಸ್ಟಿಕ್ಸ್ ನಡೆಸುತ್ತಿದ್ದರು ಎನ್ನಲಾಗಿದೆ.

Advertisement

ದಾಬಸ್​​ಪೇಟೆಯಿಂದ ಹಣ ತೆಗೆದುಕೊಂಡು ಬಂದಿದ್ದ ಅತೀಕ್, ನೆಲಮಂಗಲದಲ್ಲಿ ಮಿಕ್ಸಿ ರಿಪೇರಿ ಮಾಡಿಸಲು ಹೋಗಿದ್ದರು. ಕಾರಿನಲ್ಲಿ ಹಣದ ಬ್ಯಾಗ್ ಇಟ್ಟು ತೆರಳಿದ್ದರು. ವಾಪಸ್ ಬಂದು ನೋಡಿದಾಗ ಹಣ ಕಳ್ಳತನವಾಗಿದ್ದು ಬೆಳಕಿಗೆ ಬಂದಿದೆ. ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ. ದೂರಿನ ಅನ್ವಯ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here