ಬೆಂಗಳೂರು:- ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಇಂದು IPL ಫೈನಲ್ ಫೈಟ್ ನಡೆಯಲಿದೆ. ಹೀಗಾಗಿ ಜರ್ಸಿ ಧರಿಸಿ ಶುಭಕೋರಿರುವ DCM ಡಿಕೆ ಶಿವಕುಮಾರ್, ಆರ್ಸಿಬಿ ಹುಡುಗರೇ ಟ್ರೋಫಿ ಗೆದ್ದುಕೊಂಡು ತವರಿಗೆ ಬನ್ನಿ ಎಂದು ಹಾರೈಸಿದ್ದಾರೆ.
ಇಂತಹ ಅದ್ಭುತ ದಿನಕ್ಕಾಗಿ ಕಳೆದ 18 ವರ್ಷಗಳಿಂದ ಕಾತುರದಿಂದ ಕಾಯುತ್ತಿದ್ದೇವೆ. ಟ್ರೋಫಿಗಾಗಿ ಸಾಕಷ್ಟು ಶ್ರಮ ಪಟ್ಟು ಆರ್ಸಿಬಿ ಕೊನೆಗೆ ಐಪಿಎಲ್ನಲ್ಲಿ ಫೈನಲ್ ತಲುಪಿದೆ. ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಖಾಡಕ್ಕೆ ಇಳಿಯುತ್ತಿದೆ. ಇಡೀ ರಾಜ್ಯವೆಲ್ಲಾ ಟ್ರೋಫಿ ಗೆದ್ದು ಬರಲಿ ಎಂದು ಆರ್ಸಿಬಿ ತಂಡದ ಹಿಂದೆ ನಿಂತಿದೆ. ಆ ಅದ್ಭುತ ಕ್ಷಣವನ್ನು ಸಾಧಿಸಿ ತೋರಿಸಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಆರ್ಸಿಬಿ ಕೇವಲ ಜೆರ್ಸಿ ಅಲ್ಲ, ಅದರ ಮೇಲೆ ಮಿಲಿಯನ್, ಮಿಲಿಯನ್ ಡ್ರೀಮ್ಗಳು ಇವೆ. ನಾವು ನಿಮ್ಮೊಂದಿಗೆ ಇದ್ದೇವೆ. ಕರ್ನಾಟಕ ಹಾಗೂ ಇಲ್ಲಿನ ಸರ್ಕಾರವೆಲ್ಲಾ ನಿಮ್ಮೊಂದಿಗೆ ನಿಂತಿದೆ. ಆರ್ಸಿಬಿ ಹುಡುಗರೇ ತವರಿಗೆ ಕಪ್ ಗೆದ್ದುಕೊಂಡು ಬನ್ನಿ. ಟ್ರೋಫಿಗಾಗಿ ಕರ್ನಾಟಕದ ಕೋಟಿ ಕೋಟಿ ಜನರು ಹಾಗೂ ನಾನು ಕಾಯುತ್ತಿದ್ದೇನೆ. ಎಲ್ಲರಿಗೂ ಆಲ್ ದೀ ಬೆಸ್ಟ್ ಎಂದು ಡಿ.ಕೆ ಶಿವಕುಮಾರ್ ಅವರು ಶುಭ ಹಾರೈಸಿದ್ದಾರೆ.