ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ, ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ: BSY

0
Spread the love

ಬೆಂಗಳೂರು: ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ, ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು   ನಟ ಕಮಲ್ ಹಾಸನ್ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ ಅವರು, ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಕನ್ನಡಿಗರ ಘೋಷವಾಕ್ಯ ಮಾತ್ರವಲ್ಲ,

Advertisement

ಇದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿಯ ಮೇಲಿರುವ ಕನ್ನಡಿಗರ ದೀಕ್ಷೆ. ಕನ್ನಡ ಯಾವುದೇ ನಿರ್ದಿಷ್ಟ ಭಾಷೆಯಿಂದ ಹುಟ್ಟಿಕೊಂಡಿಲ್ಲ ಎಂದು ಅನೇಕ ಹಿರಿಯ ಭಾಷಾ ಪರಿಣಿತರು ಸಿದ್ಧ ಮಾಡಿ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ಅನಗತ್ಯವಾಗಿ ಶಾಂತಿ, ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವುಂಟು ಮಾಡುವ ಅವರ ವರ್ತನೆ ಸರಿಯಲ್ಲ. ಅವರ ಅಭಿಪ್ರಾಯ ಮಂಡನೆಯ ಭರದಲ್ಲಿ ಕೋಟ್ಯಂತರ ಕನ್ನಡಿಗರ ಭಾವನೆಗಳಿಗೆ ಘಾಸಿಯುಂಟು ಮಾಡಿದ್ದು,

ಅವರು ಗೌರವಯುತವಾಗಿ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದ್ದಾರೆ.ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ, ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು ಕೂಡ ಬಿಎಸ್​ವೈ ಹೇಳಿದ್ದಾರೆ.

 


Spread the love

LEAVE A REPLY

Please enter your comment!
Please enter your name here