ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಮೈಸೂರು, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಗದಗ ಇವರ ಸಹಯೋಗದಲ್ಲಿ ಮಂಗಳವಾರ ಲಕ್ಕುಂಡಿಯ ಶ್ರೀ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಉತ್ಖನನಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು.
ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ, ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ಶಾಸಕರುಗಳಾದ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ಎನ್.ಎಚ್. ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಲಕ್ಕುಂಡಿ ಗ್ರಾ.ಪಂ ಅಧ್ಯಕ್ಷ ಕೆಂಚಪ್ಪ ಪೂಜಾರ, ಗ್ರಾ.ಪಂ ಉಪಾಧ್ಯಕ್ಷರು, ಸದಸ್ಯರು, ಮಾಜಿ ಸಚಿವರಾದ ಎಸ್.ಎಸ್. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಮಾಜಿ ಸಂಸದ ಐ.ಜಿ. ಸನದಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಸಿ.ಇ.ಓ ಭರತ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.