ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘೋರ ದುರಂತ; RCB ಫ್ಯಾನ್ಸ್ ನೂಕು ನುಗ್ಗಲಿಗೆ ಸಾವಿನ ಸಂಖ್ಯೆ 11ಕ್ಕೆ ಏರಿಕೆ

0
Spread the love

ಬೆಂಗಳೂರು: ಬರೋಬ್ಬರಿ 18 ವರ್ಷಗಳ ಬಳಿಕ ಕನಸು ನನಸಾಗಿದೆ. ಆರ್‌ಸಿಬಿ ಕೊನೆಗೂ ಕಪ್‌ ಗೆದ್ದಿದೆ. ಆದ್ರೆ ಇದೇ ಖುಷಿಯಲ್ಲಿ ಇಂದು ಬೆಂಗಳೂರಿಗೆ RCB ಆಟಗಾರರು ಬಂದಿದ್ದಾರೆ. ಆರ್ ಸಿಬಿ ಆಟಗಾರರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ವಿಧಾನಸೌಧದ ಮುಂದೆ ಜಮಾಯಿಸಿದ್ದಾರೆ.

Advertisement

ಇದೇ ವೇಳೆ ಅಭಿಮಾನಿಗಳೆಲ್ಲಾ ಚಿನ್ನಸ್ವಾಮಿ ಸ್ಟೇಡಿಯಂ ಏಕಾಏಕಿ ಬಂದಿದ್ದಾರೆ. ಇದೇ ನೂಕು ನುಗ್ಗಲು ಉಂಟಾಗಿ 11 ಮಂದಿ ಸಾವನ್ನಪ್ಪಿದ್ದಾರೆ. 7 ಮಂದಿ ಬೌರಿಂಗ್ ಆಸ್ಪತ್ರೆಯಲ್ಲಿ, 4 ಮಂದಿ ವೈದೇಹಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು ದಾಖಲಿಸಲಾಗಿದೆ. ಸದ್ಯ 7 ಮಂದಿಗೆ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಘಟನೆಯಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ. 7 ಮಂದಿ ಬೌರಿಂಗ್ ಆಸ್ಪತ್ರೆಯಲ್ಲಿ ಹಾಗೂ 4 ಮಂದಿ ವೈದೇಹಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಆರ್‌ಸಿಬಿ ಆಟಗಾರರನ್ನು ನೋಡೋ ಆಸೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆಗಮಿಸಿದ್ದರು. ಈ ವೇಳೆ ನಿಯಂತ್ರಣ ತಪ್ಪಿದೆ. ನೂಕುನುಗ್ಗಲು ಉಂಟಾಗಿದೆ. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ಈ ದುರಂತ ನಡೆದಿದೆ.


Spread the love

LEAVE A REPLY

Please enter your comment!
Please enter your name here