ವಿಜಯಸಾಕ್ಷಿ ಸುದ್ದಿ, ಗದಗ: ಸಮೀಪದ ತಿಮ್ಮಾಪೂರ ಗ್ರಾಮದ ಹೆಮ್ಮೆಯ ಸುಪುತ್ರ, ದೇವಪ್ಪ ಜೋಗಿನ ಭಾರತೀಯ ಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ನಂತರ ಮರಳಿ ತಾಯ್ನಾಡಿಗೆ ಆಗಮಿಸಿದ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಗದಗ ಜಿಲ್ಲಾ ಮಾಜಿ ಸೈನಿಕರ ಸಂಘದಿಂದ ಭವ್ಯವಾಗಿ ಸ್ವಾಗತಿಸಲಾಯಿತು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಗ್ರಾಮಸ್ಥರು, ಮಾಜಿ ಸೈನಿಕರು ಕರೆತಂದಾಗ ಗ್ರಾಮದ ಮಹಿಳೆಯರು ಆರತಿ ಬೆಳಗಿ, ನಂತರ ಮಾರುತೇಶ್ವರ ದೇವಸ್ಥಾನಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ, ಗದಗ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಬಸಲಿಂಗಪ್ಪ ಮುಂಡರಗಿ ನಿವೃತ್ತ ಯೋಧನನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕೆವಿಎಸ್ಆರ್ ಕಾಲೇಜಿನ ಪ್ರಾಂಶುಪಾಲ ಈರಣ್ಣ ಕಮತರ, ಉಪನ್ಯಾಸಕರಾದ ಶಾಂತಕುಮಾರ ಮಲ್ಲಾಪೂರ, ರಾಯಣ್ಣ ಕುರಡಗಿ, ಮಂಜುನಾಥ ತಳವಾರ, ಬಾಲಪ್ಪ ಜೋಗಿನ, ನಿಂಗಪ್ಪ ಹಂಚಿನಾಳ, ಮಾರುತಿ ಲಕ್ಕುಂಡಿ ಅಲ್ಲಿಸಾಬ ನದಾಫ್, ಕುಟುಂಬಸ್ಥರು ಪಾಲ್ಗೊಂಡಿದ್ದರು.