ಬೆಂಗಳೂರು: ಚಿನ್ನಸ್ವಾಮಿ ಮೈದಾನಕ್ಕೆ ಅಪಾರ ಅಭಿಮಾನಿಗಳು ಹರಿದು ಬಂದ ಪರಿಣಾಮ ಏಕಾಏಕಿ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಘೋರ ದುರಂತದಲ್ಲಿ 11 ಮಂದಿ ಅಮಾಯಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ..
ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ್ದು, ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಿಗದಿಪಡಿಸಿದೆ.
ಎಜಿ ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದಾರೆ. ವಕೀಲ ಹೇಮಂತ್ ರಾಜ್, ಜಿ.ಆರ್.ಮೋಹನ್ ಕೂಡ ಮಾಹಿತಿ ನೀಡಲಿದ್ದಾರೆ. ಹೈಕೋರ್ಟ್ ಕಟ್ಟಡದ ಮೇಲೂ ಜನರು ನಿಂತಿದ್ದರು.
ಭದ್ರತಾ ಲೋಪವಾಗಿದೆ ಎಂದು ವಕೀಲರು ಕೋರ್ಟ್ಗೆ ಮಾಹಿತಿ ನೀಡಿದ್ದಾರೆ. ಜನರ ಸಾವುನೋವಿನ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಭದ್ರತಾ ಲೋಪದ ಬಗ್ಗೆ ಸರ್ಕಾರದ ವರದಿ ಕೇಳಿದ್ದೇವೆ. ವಿಚಾರಣೆ 2:30ಕ್ಕೆ ನಿಗದಿಯಾಗಿದೆ ಎಂದು ನ್ಯಾಯಾಲಯ ಹೇಳಿದೆ.