ಚಿನ್ನಸ್ವಾಮಿ ದುರಂತ: ಕಮಿಷನರ್ ದಯಾನಂದ್ ಸೇರಿ ಐವರು ಅಧಿಕಾರಿಗಳ ತಲೆದಂಡ!

0
Spread the love

ಬೆಂಗಳೂರು:- ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಪೊಲೀಸ್ ಕಮಿಷನರ್ ದಯಾನಂದ್ ಸೇರಿ ಐವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ.

Advertisement

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್‌ ಕಮೀಷನರ್‌ ಬಿ.ದಯಾನಂದ್‌ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ. ಈ ದುರಂತದ ಹಿನ್ನೆಲೆ ರಾಜ್ಯ ಸರ್ಕಾರದ ಮೇಲೂ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಮೊದಲಿಗೆ ಹೊಣೆ ಹೊತ್ತುಕೊಳ್ಳದ ಸರ್ಕಾರವು ಇದೀಗ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡುವ ಮೂಲಕ ಕ್ರಮ ಕೈಗೊಂಡಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಎಸಿಪಿ ಬಾಲಕೃಷ್ಣ, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರನ್ನ ಅಮಾನತು ಮಾಡಿ ಆದೇಶ ಹೊರಡಿಸಿದೆ. ಇದರ ಜೊತೆಗೆ ಕಬ್ಬನ್ ​ಪಾರ್ಕ್ ಪೊಲೀಸ್ ಇನ್ಸ್​ಪೆಕ್ಟರ್, ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರಿಕೆಟ್ ಸ್ಟೇಡಿಯಂನ ಇನ್​ಚಾರ್ಜ್​ ಅವರನ್ನು ಕೂಡ ತಕ್ಷಣದಿಂದಲೇ ಅಮಾನತು ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ಈ ಘಟನೆಗೆ ಪೊಲೀಸ್‌ ಅಧಿಕಾರಿಗಳನ್ನು ಸರ್ಕಾರ ಹೊಣೆ ಮಾಡಿದೆ.

ಸಸ್ಪೆಂಡ್ ಆದವರ ವಿವರ:

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ – ಬಿ.ದಯಾನಂದ್‌

ಅಡಿಷನಲ್ ಕಮಿಷನರ್ – ವಿಕಾಸ್ ಕುಮಾರ್ ವಿಕಾಸ್, ಪಶ್ಚಿಮ ವಿಭಾಗ..

ಡಿಸಿಪಿ – ಶೇಖರ್, ಕೇಂದ್ರ ವಿಭಾಗ‌‌..

ಕಬ್ಬನ್ ಪಾರ್ಕ್ ಎಸಿಪಿ – ಬಾಲಕೃಷ್ಣ

ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ – ಗಿರೀಶ್

ಈ ಮೇಲ್ಕಂಡ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


Spread the love

LEAVE A REPLY

Please enter your comment!
Please enter your name here