ಬೆಂಗಳೂರು ಕಮಿಷನರ್ ದಯಾನಂದ್ ಸಸ್ಪೆಂಡ್: ಇದು ಇತಿಹಾಸದಲ್ಲೇ ಅತ್ಯಂತ ಕರಾಳ ದಿನ- ಭಾಸ್ಕರ್ ರಾವ್ ಕಿಡಿ!

0
Spread the love

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕಮಿಷನರ್ ಆಗಿದ್ದ ದಯಾನಂದ್ ಅವರನ್ನು ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ಇನ್ನೂ ರಾಜ್ಯ ಸರ್ಕಾರದ ಈ ನಿರ್ಧಾರವನ್ನು ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಭಾಸ್ಕರ್ ರಾವ್, ಸಿದ್ದರಾಮಯ್ಯ ಅವರು ಭಯಗೊಂಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಅಮಾನತು ಮಾಡಿರುವುದು ಕರ್ನಾಟಕ ಪೊಲೀಸ್ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ಸತ್ಯ ಹೇಳಿದ್ದಕ್ಕೆ ಅವರಿಗೆ ಶಿಕ್ಷೆಯ ರೂಪದಲ್ಲಿ ಬಹುಮಾನ ನೀಡಿದ್ದಾರೆ.

ದಯಾನಂದ್‌ ಮತ್ತು ಅವರ ತಂಡ ಬೆಂಗಳೂರನ್ನು ಸುರಕ್ಷಿತವಾಗಿಡಲು ಇಡೀ ರಾತ್ರಿ ಶ್ರಮಿಸಿದ್ದರು. ಸಾವಿನ ಪರೇಡ್‌ ನಡೆಸಲು ಕಾರಣರಾದ ಉಪಮುಖ್ಯಮಂತ್ರಿಯೇ ಈ ಪ್ರಕರಣದಲ್ಲಿ ಪ್ರಮುಖ ಅಪರಾಧಿ ಎಂದು ಕರ್ನಾಟಕದ ಎಲ್ಲರಿಗೂ ತಿಳಿದಿದೆ.

ಯಾವುದೇ ಮುಖ್ಯಮಂತ್ರಿ ಇಷ್ಟು ಅಸಹಾಯಕ, ಹೇಡಿಯಾಗಲು ಸಾಧ್ಯವಿಲ್ಲ. ಸರ್ಕಾರದ ಕೈಗೆ ರಕ್ತ ಅಂಟಿಕೊಂಡಿದ್ದು ಈಗ ನಿಯಂತ್ರಣವನ್ನು ಕಳೆದುಕೊಂಡಿದ್ದು ಅಪಾಯದಲ್ಲಿದೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here